<p><strong>ತಿಪಟೂರು: </strong>ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರುಹಾಜರಾಗಿದ್ದ ಅಧಿಕಾರಿಯನ್ನು ಅಮಾನತು ಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.</p>.<p>ಸಚಿವರು ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ತಾಲ್ಲೂಕಿನ ಬಿದರೆಗುಡಿ ಕಾವಲ್ ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದರು. ಆಗ ಕೇಂದ್ರದ ಮುಖ್ಯಸ್ಥ ಡಾ.ವಿ.ಗೋವಿಂದೇಗೌಡ ಬೆಂಗಳೂರಿನ ಮುಖ್ಯ ಕಚೇರಿಗೆ ಭೇಟಿ ನೀಡಿರುವುದಾಗಿ ಕೇಂದ್ರದ ಸಿಬ್ಬಂದಿಯೊಬ್ಬರು ಸಚಿವರಿಗೆ ತಿಳಿಸಿದ್ದಾರೆ.</p>.<p>ಕಚೇರಿಯಲ್ಲಿದ್ದ ಹಾಜರಾತಿ ಪುಸ್ತಕ, ಇತರೆ ದಾಖಲೆಗಳನ್ನು ಪರಿಶೀಲಿಸಿದಾಗ ಎಲ್ಲ ದಾಖಲೆಗಳು ಅಸ್ಪಷ್ಟ ವಾಗಿದ್ದವು. ಅತಿ ಹೆಚ್ಚು ಗೈರುಹಾಜರಿ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಹಾಗೂ ನ್ಯಾಷನಲ್ ಸೀಡ್ಸ್ ಪ್ರಾಜೆಕ್ಟ್ ಮುಖ್ಯಸ್ಥರನ್ನು ದೂರವಾಣಿ ಮೂಲಕ ವಿಚಾರಿಸಿದರು. ಆಗ ಬೆಂಗಳೂರಿನ ಕಚೇರಿಗೆ ಹೋಗದೆ ಇರುವ ಮಾಹಿತಿ ಲಭ್ಯವಾಗಿದೆ.</p>.<p>ಕೂಡಲೇ ಅಮಾನತು ಮಾಡುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗೆ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರುಹಾಜರಾಗಿದ್ದ ಅಧಿಕಾರಿಯನ್ನು ಅಮಾನತು ಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.</p>.<p>ಸಚಿವರು ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ತಾಲ್ಲೂಕಿನ ಬಿದರೆಗುಡಿ ಕಾವಲ್ ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದರು. ಆಗ ಕೇಂದ್ರದ ಮುಖ್ಯಸ್ಥ ಡಾ.ವಿ.ಗೋವಿಂದೇಗೌಡ ಬೆಂಗಳೂರಿನ ಮುಖ್ಯ ಕಚೇರಿಗೆ ಭೇಟಿ ನೀಡಿರುವುದಾಗಿ ಕೇಂದ್ರದ ಸಿಬ್ಬಂದಿಯೊಬ್ಬರು ಸಚಿವರಿಗೆ ತಿಳಿಸಿದ್ದಾರೆ.</p>.<p>ಕಚೇರಿಯಲ್ಲಿದ್ದ ಹಾಜರಾತಿ ಪುಸ್ತಕ, ಇತರೆ ದಾಖಲೆಗಳನ್ನು ಪರಿಶೀಲಿಸಿದಾಗ ಎಲ್ಲ ದಾಖಲೆಗಳು ಅಸ್ಪಷ್ಟ ವಾಗಿದ್ದವು. ಅತಿ ಹೆಚ್ಚು ಗೈರುಹಾಜರಿ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಹಾಗೂ ನ್ಯಾಷನಲ್ ಸೀಡ್ಸ್ ಪ್ರಾಜೆಕ್ಟ್ ಮುಖ್ಯಸ್ಥರನ್ನು ದೂರವಾಣಿ ಮೂಲಕ ವಿಚಾರಿಸಿದರು. ಆಗ ಬೆಂಗಳೂರಿನ ಕಚೇರಿಗೆ ಹೋಗದೆ ಇರುವ ಮಾಹಿತಿ ಲಭ್ಯವಾಗಿದೆ.</p>.<p>ಕೂಡಲೇ ಅಮಾನತು ಮಾಡುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗೆ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>