ತಿಪಟೂರು: ನಿರಂತರವಾಗಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ, ಬಜರಂಗದಳದ ವತಿಯಿಂದ ಶುಕ್ರವಾರ ತಿಪಟೂರು ನಗರ ಬಂದ್ಗೆ ಕರೆ ನೀಡಿದ್ದು, ನಗರದಲ್ಲಿ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ನಗರದಾದ್ಯಂತ ಬಂದ್ ಅಂಗವಾಗಿ ಅಂಗಡಿ ಮಾಲೀಕರು, ಸಾರ್ವಜನಿಕರಿಗೆ ಸಂಘಟನೆ ವತಿಯಿಂದ ಕರಪತ್ರಗಳನ್ನು ಹಂಚುವ ಮೂಲಕ ಮಾಹಿತಿ ನೀಡಿದ್ದರು.
ನಗರದ ಶಾಲಾ, ಕಾಲೇಜುಗಳಿಗೆ ಮುನ್ನೆಚ್ಚರಿಕೆಯಾಗಿ ರಜೆ ಘೋಷಿಸಲಾಗಿದೆ. ವಾಹನ ಸಂಚಾರ ವಿರಳವಾಗಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.