<p><strong>ತಿಪಟೂರು:</strong> ನಗರದ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಮೆಟ್ರಿಕ್ ನಂತರದ ವಸತಿನಿಲಯಗಳ ನಿಲಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ, ಯುಪಿಎಸ್ಸಿ ಅಥವಾ ಇನ್ನಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಗೆಲ್ಲುವುದು ಅಸಾಧ್ಯವಲ್ಲ. ಆದರೆ ಗುರಿ ಇರಿಸಿಕೊಂಡು ನಿರಂತರ ಅಭ್ಯಾಸ ಮಾಡಬೇಕು. ಶ್ರದ್ಧೆ, ಪ್ರಯತ್ನ ಇದ್ದರೆ ಯಾವುದೂ ಅಸಾಧ್ಯವಲ್ಲ ಎಂದು ತಿಳಿಸಿದರು.</p>.<p>ಸರ್ಕಾರ ಬಿಸಿಎಂ ವಿದ್ಯಾರ್ಥಿಗಳಿಗಾಗಿಯೇ ವಿಶೇಷ ತರಬೇತಿ ಶಿಬಿರಗಳನ್ನು ಆಯೋಜಿಸುತ್ತಿದೆ. ಅದಕ್ಕಾಗಿ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ತೇರ್ಗಡೆ ಹೊಂದಿದವರಿಗೆ ಉಚಿತವಾಗಿ ದೆಹಲಿ, ಬೆಂಗಳೂರು ಅಥವಾ ಹೈದರಾಬಾದ್ಗೆ ಕಳುಹಿಸಿ ತರಬೇತಿ ನೀಡುತ್ತದೆ. ವಸತಿಯನ್ನೂ ಉಚಿತವಾಗಿ ನೀಡುತ್ತದೆ ಎಂದರು.</p>.<p>ಎಸ್ವಿಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಇದೆ. ಅವಕಾಶಗಳೂ ಇವೆ. ದೂರದೃಷ್ಟಿ ಇಟ್ಟುಕೊಂಡು ಅಭ್ಯಾಸ ಮಾಡಿ, ಪ್ರತಿದಿನ ದಿನಪತ್ರಿಕೆಗಳನ್ನು ಓದಿ. ವರ್ತನೆಗಳ ಪರಿವರ್ತನೆಯೇ ಶಿಕ್ಷಣ ಎಂದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ ಮಾತನಾಡಿ, ಶಿಕ್ಷಣದ ನಂತರ ಮುಂದೇನು ಎನ್ನುವ ಪ್ರಶ್ನೆಗೆ ಉತ್ತರ ಹಾಗೂ ಇರುವ ಗೊಂದಲವನ್ನು ಪರಿಹರಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲು ಆದೇಶಿಸಿದೆ. ಶಿಕ್ಷಣ ತಜ್ಞರು, ವೃತ್ತಿಪರರು, ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್, ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್, ನಿಂಗಪ್ಪ, ಬಿಸಿಎಂ ಇಲಾಖೆಯ ಕಾಂತರಾಜು, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ನಗರದ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಮೆಟ್ರಿಕ್ ನಂತರದ ವಸತಿನಿಲಯಗಳ ನಿಲಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ, ಯುಪಿಎಸ್ಸಿ ಅಥವಾ ಇನ್ನಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಗೆಲ್ಲುವುದು ಅಸಾಧ್ಯವಲ್ಲ. ಆದರೆ ಗುರಿ ಇರಿಸಿಕೊಂಡು ನಿರಂತರ ಅಭ್ಯಾಸ ಮಾಡಬೇಕು. ಶ್ರದ್ಧೆ, ಪ್ರಯತ್ನ ಇದ್ದರೆ ಯಾವುದೂ ಅಸಾಧ್ಯವಲ್ಲ ಎಂದು ತಿಳಿಸಿದರು.</p>.<p>ಸರ್ಕಾರ ಬಿಸಿಎಂ ವಿದ್ಯಾರ್ಥಿಗಳಿಗಾಗಿಯೇ ವಿಶೇಷ ತರಬೇತಿ ಶಿಬಿರಗಳನ್ನು ಆಯೋಜಿಸುತ್ತಿದೆ. ಅದಕ್ಕಾಗಿ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ತೇರ್ಗಡೆ ಹೊಂದಿದವರಿಗೆ ಉಚಿತವಾಗಿ ದೆಹಲಿ, ಬೆಂಗಳೂರು ಅಥವಾ ಹೈದರಾಬಾದ್ಗೆ ಕಳುಹಿಸಿ ತರಬೇತಿ ನೀಡುತ್ತದೆ. ವಸತಿಯನ್ನೂ ಉಚಿತವಾಗಿ ನೀಡುತ್ತದೆ ಎಂದರು.</p>.<p>ಎಸ್ವಿಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಇದೆ. ಅವಕಾಶಗಳೂ ಇವೆ. ದೂರದೃಷ್ಟಿ ಇಟ್ಟುಕೊಂಡು ಅಭ್ಯಾಸ ಮಾಡಿ, ಪ್ರತಿದಿನ ದಿನಪತ್ರಿಕೆಗಳನ್ನು ಓದಿ. ವರ್ತನೆಗಳ ಪರಿವರ್ತನೆಯೇ ಶಿಕ್ಷಣ ಎಂದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ ಮಾತನಾಡಿ, ಶಿಕ್ಷಣದ ನಂತರ ಮುಂದೇನು ಎನ್ನುವ ಪ್ರಶ್ನೆಗೆ ಉತ್ತರ ಹಾಗೂ ಇರುವ ಗೊಂದಲವನ್ನು ಪರಿಹರಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲು ಆದೇಶಿಸಿದೆ. ಶಿಕ್ಷಣ ತಜ್ಞರು, ವೃತ್ತಿಪರರು, ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್, ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್, ನಿಂಗಪ್ಪ, ಬಿಸಿಎಂ ಇಲಾಖೆಯ ಕಾಂತರಾಜು, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>