<p>ತಿಪಟೂರು: ನಗರದ ತಾಲ್ಲೂಕು ಆಡಳಿತಸೌಧದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.</p>.<p>ತಹಶೀಲ್ದಾರ್ ಮೋಹನ್ಕುಮಾರ್ ಮಾತನಾಡಿ, ದೇವರ ದಾಸಿಮಯ್ಯ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಮಹಾನ್ ವಚನಕಾರ. ಅವರ ಸಂದೇಶಗಳು ಸಮಾನತೆ, ಸತ್ಯ ಮತ್ತು ನೈತಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ ಎಂದು ತಿಳಿಸಿದರು.</p>.<p>ರಾಜ್ಯ ನಿರ್ದೇಶಕ ಎಚ್.ಎನ್.ರಂಗಸ್ವಾಮಿ ಮಾತನಾಡಿ, ದಾಸಿಮಯ್ಯ ಅವರ ಬಾಲ್ಯ ಜೀವನ ಹಾಗೂ ಅವರು ರಚಿಸಿದ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಮಹತ್ವದ ಪಾತ್ರವಹಿಸಿವೆ. ವಚನ ಸಾಹಿತ್ಯಕ್ಕೆ ನೀಡಿದ ಅವರ ಅಮೂಲ್ಯ ಕೊಡುಗೆಯಿಂದ ‘ವಚನ ಬ್ರಹ್ಮ’ ಗೌರವಕ್ಕೆ ಪಾತ್ರರಾದರು ಎಂದರು.</p>.<p>ದೇವಾಂಗ ಸಮುದಾಯದ ಕೋಟೆನಾಯಕನಹಳ್ಳಿ ಪರಪ್ಪ, ಜಿ.ಆರ್.ಮಂಜುನಾಥ್, ತಾಲೂಕು ಅಧ್ಯಕ್ಷ ಎಂ.ಧನಂಜಯ್, ಬಿಜೆಪಿ ನಗರಾಧ್ಯಕ್ಷ ಎಚ್.ಆರ್.ಜಗದೀಶ್, ಹಿಂಡಿಸ್ಕೆರೆ ಪ್ರಕಾಶ್, ಕೋಟೆನಾಯಕನಹಳ್ಳಿ ಪ್ರಶಾಂತ್, ರಂಗಪ್ಪ ಜೀವನ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-17-887330347</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ನಗರದ ತಾಲ್ಲೂಕು ಆಡಳಿತಸೌಧದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.</p>.<p>ತಹಶೀಲ್ದಾರ್ ಮೋಹನ್ಕುಮಾರ್ ಮಾತನಾಡಿ, ದೇವರ ದಾಸಿಮಯ್ಯ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಮಹಾನ್ ವಚನಕಾರ. ಅವರ ಸಂದೇಶಗಳು ಸಮಾನತೆ, ಸತ್ಯ ಮತ್ತು ನೈತಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ ಎಂದು ತಿಳಿಸಿದರು.</p>.<p>ರಾಜ್ಯ ನಿರ್ದೇಶಕ ಎಚ್.ಎನ್.ರಂಗಸ್ವಾಮಿ ಮಾತನಾಡಿ, ದಾಸಿಮಯ್ಯ ಅವರ ಬಾಲ್ಯ ಜೀವನ ಹಾಗೂ ಅವರು ರಚಿಸಿದ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಮಹತ್ವದ ಪಾತ್ರವಹಿಸಿವೆ. ವಚನ ಸಾಹಿತ್ಯಕ್ಕೆ ನೀಡಿದ ಅವರ ಅಮೂಲ್ಯ ಕೊಡುಗೆಯಿಂದ ‘ವಚನ ಬ್ರಹ್ಮ’ ಗೌರವಕ್ಕೆ ಪಾತ್ರರಾದರು ಎಂದರು.</p>.<p>ದೇವಾಂಗ ಸಮುದಾಯದ ಕೋಟೆನಾಯಕನಹಳ್ಳಿ ಪರಪ್ಪ, ಜಿ.ಆರ್.ಮಂಜುನಾಥ್, ತಾಲೂಕು ಅಧ್ಯಕ್ಷ ಎಂ.ಧನಂಜಯ್, ಬಿಜೆಪಿ ನಗರಾಧ್ಯಕ್ಷ ಎಚ್.ಆರ್.ಜಗದೀಶ್, ಹಿಂಡಿಸ್ಕೆರೆ ಪ್ರಕಾಶ್, ಕೋಟೆನಾಯಕನಹಳ್ಳಿ ಪ್ರಶಾಂತ್, ರಂಗಪ್ಪ ಜೀವನ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-17-887330347</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>