<p><strong>ತಿಪಟೂರು</strong>: ಮೂರು ತಿಂಗಳಿನಿಂದ ಹಾಲಿನ ಬಟವಾಡೆ ಸ್ಥಗಿತಗೊಳಿಸಲಾಗಿದೆ. ತಕ್ಷಣ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ಬುಧವಾರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ನೊಣವಿನಕೆರೆ ಹೋಬಳಿ ಜಿ.ಮೇಲನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು ಮೂರು ತಿಂಗಳ ಹಿಂದೆ ಸ್ಥಳೀಯ ಆಡಳಿತ ಮಂಡಳಿ ವಜಾಗೊಳಿಸಿತ್ತು. ವಜಾಗೊಂಡ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದು, ಈ ವಿಚಾರದಲ್ಲಿ ಉಂಟಾದ ಗೊಂದಲ ಹಾಗೂ ಆಡಳಿತಾತ್ಮಕ ತಕರಾರಿನಿಂದ ಮೂರು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಬಟವಾಡಿ ಹಣ ಪಾವತಿ ಸ್ಥಗಿತಗೊಂಡಿದೆ ಎಂದು ರೈತರು ಆರೋಪಿಸಿದರು.</p>.<p>ಹೈನುಗಾರರಿಗೆ ತೀವ್ರ ತೊಂದರೆಯಾಗಿದ್ದು, ತಕ್ಷಣ ಹಾಲಿನ ಬಾಕಿ ಹಣ ಬಿಡುಗಡೆ ಮಾಡುವಂತೆ ರೈತರು ಹಾಗೂ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ಸಲ್ಲಿಸಿದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ನಿಬಂಧಕರು, ಈ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಜ್ಯವು ನ್ಯಾಯಾಲಯದಲ್ಲಿರುವುದರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಉತ್ಪಾದಕರ ಹಾಲಿನ ಬಟವಾಡಿಯನ್ನು ತುಮುಲ್ನ ವಿಸ್ತರಣಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ಬಟವಾಡಿ ಮಾಡುವಂತೆ ಆದೇಶಿಸಲಾಗುವುದು. ವಿಸ್ತರಣಾಧಿಕಾರಿಗಳ ಕಾರ್ಯವೈಫಲ್ಯದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.</p>.<p>ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷೆ ಹೇಮಾವತಿ, ನಿರ್ದೇಶಕರಾದ ಪ್ರೇಮ, ಅನಿತ, ಮಮತಾ, ಲತಾಮಣಿ, ನೇತ್ರಾವತಿ, ಹಾಲು ಉತ್ಪಾದಕರಾದ ರಾಜಣ್ಣ, ಶಿವಣ್ಣ, ಶಿವರಾಜು, ಬೀರಲಿಂಗಪ್ಪ, ರಂಗಸ್ವಾಮಿ, ರೈತರು ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-17-1741707193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಮೂರು ತಿಂಗಳಿನಿಂದ ಹಾಲಿನ ಬಟವಾಡೆ ಸ್ಥಗಿತಗೊಳಿಸಲಾಗಿದೆ. ತಕ್ಷಣ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ಬುಧವಾರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ನೊಣವಿನಕೆರೆ ಹೋಬಳಿ ಜಿ.ಮೇಲನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು ಮೂರು ತಿಂಗಳ ಹಿಂದೆ ಸ್ಥಳೀಯ ಆಡಳಿತ ಮಂಡಳಿ ವಜಾಗೊಳಿಸಿತ್ತು. ವಜಾಗೊಂಡ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದು, ಈ ವಿಚಾರದಲ್ಲಿ ಉಂಟಾದ ಗೊಂದಲ ಹಾಗೂ ಆಡಳಿತಾತ್ಮಕ ತಕರಾರಿನಿಂದ ಮೂರು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಬಟವಾಡಿ ಹಣ ಪಾವತಿ ಸ್ಥಗಿತಗೊಂಡಿದೆ ಎಂದು ರೈತರು ಆರೋಪಿಸಿದರು.</p>.<p>ಹೈನುಗಾರರಿಗೆ ತೀವ್ರ ತೊಂದರೆಯಾಗಿದ್ದು, ತಕ್ಷಣ ಹಾಲಿನ ಬಾಕಿ ಹಣ ಬಿಡುಗಡೆ ಮಾಡುವಂತೆ ರೈತರು ಹಾಗೂ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮನವಿ ಸಲ್ಲಿಸಿದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ನಿಬಂಧಕರು, ಈ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಜ್ಯವು ನ್ಯಾಯಾಲಯದಲ್ಲಿರುವುದರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಉತ್ಪಾದಕರ ಹಾಲಿನ ಬಟವಾಡಿಯನ್ನು ತುಮುಲ್ನ ವಿಸ್ತರಣಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ಬಟವಾಡಿ ಮಾಡುವಂತೆ ಆದೇಶಿಸಲಾಗುವುದು. ವಿಸ್ತರಣಾಧಿಕಾರಿಗಳ ಕಾರ್ಯವೈಫಲ್ಯದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.</p>.<p>ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷೆ ಹೇಮಾವತಿ, ನಿರ್ದೇಶಕರಾದ ಪ್ರೇಮ, ಅನಿತ, ಮಮತಾ, ಲತಾಮಣಿ, ನೇತ್ರಾವತಿ, ಹಾಲು ಉತ್ಪಾದಕರಾದ ರಾಜಣ್ಣ, ಶಿವಣ್ಣ, ಶಿವರಾಜು, ಬೀರಲಿಂಗಪ್ಪ, ರಂಗಸ್ವಾಮಿ, ರೈತರು ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-17-1741707193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>