ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲು ರಂಗಮಂದಿರದಲ್ಲಿ ಶನಿವಾರ ಸಂಜೆ 6.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಂಗಾಪುರದ ಗುರುಪರದೇಶಿಕೇಂದ್ರ ಸ್ವಾಮೀಜಿ, ಗುರುಕುಲಾನಂದಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ತಮ್ಮಡಿಹಳ್ಳಿ ವಿರಕ್ತಮಠದ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ, ಶಾಸಕ ಕೆ.ಷಡಕ್ಷರಿ, ಮಾಜಿ ಸಚಿವ ಬಿ.ಸಿ ನಾಗೇಶ್, ಕಲಾಕೃತಿ ಸಂಸ್ಥೆಯ ಉಪಾಧ್ಯಕ್ಷ ಶಿವಪ್ರಸಾದ್, ಶ್ರೀರಂಗ ಆಸ್ಪತ್ರೆ ವೈದ್ಯ ಡಾ.ವಿವೇಚನ್, ನಗರಸಬಾ ಸದಸ್ಯ ಯೋಗೀಶ್ ಭಾಗವಹಿಸಲಿದ್ದಾರೆ. ಸಂಜೆ ‘ಕಾಮಿಡಿ ಕಿಲಾಡಿಗಳು’, ‘ಗಿಚ್ಚಿ ಗಿಲಿಗಿಲಿ’, ‘ಸರಿಗಮಪ’ ತಂಡದಿಂದ ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.