<p><strong>ತಿಪಟೂರು</strong>: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಕೋಡಿಹಳ್ಳಿ ಬೋವಿ ಕಾಲೊನಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ಬೀರೂರಿನ ಕಬಾಬ್ ವ್ಯಾಪಾರಿ ಶಫಿಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬೀರೂರಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಪುಟ್ಟರಾಜು ಎಂಬುವವರನ್ನು ಶಫಿಉಲ್ಲಾ ತಲೆ ಕತ್ತರಿಸಿ ಕೊಲೆ ಮಾಡಿದ್ದ. </p>.<p>ಪುಟ್ಟರಾಜು ಲೇವಾದೇವಿ ವ್ಯವಹಾರವನ್ನೂ ಮಾಡುತ್ತಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಇತ್ತು.</p>.<p>ಶಫಿಉಲ್ಲಾ ತಾಲ್ಲೂಕಿನ ಹೊನ್ನವಳ್ಳಿ ಬ್ಯಾಂಕ್ನಲ್ಲಿ ಒಡವೆಗಳನ್ನು ಅಡವಿಟ್ಟಿದ್ದು, ಅದನ್ನು ಬಿಡಿಸಿಕೊಳ್ಳಲೆಂದು ಇಬ್ಬರೂ ಬೀರೂರಿನಿಂದ ಜೊತೆಯಾಗಿ ಬಂದಿದ್ದರು. ಮಾರ್ಗಮಧ್ಯೆ ಶಫಿಉಲ್ಲಾ ತೋಟದ ಕೆಲಸಕ್ಕೆ ಎಂದು ಪುಟ್ಟರಾಜು ಬಳಿ ಹೇಳಿ ಮಾರಕಾಸ್ತ್ರಗಳನ್ನು ಖರೀದಿಸಿದ್ದ.</p>.<p>ಬೋವಿ ಕಾಲೊನಿ ಸಮೀಪ ಮೂತ್ರ ವಿಸರ್ಜನೆಗಾಗಿ ದ್ವಿಚಕ್ರ ವಾಹನ ನಿಲ್ಲಿಸಿದ್ದ ವೇಳೆ, ಮಾರಕಾಸ್ತ್ರದಿಂದ ಪುಟ್ಟರಾಜು ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಕೋಡಿಹಳ್ಳಿ ಬೋವಿ ಕಾಲೊನಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ಬೀರೂರಿನ ಕಬಾಬ್ ವ್ಯಾಪಾರಿ ಶಫಿಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬೀರೂರಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಪುಟ್ಟರಾಜು ಎಂಬುವವರನ್ನು ಶಫಿಉಲ್ಲಾ ತಲೆ ಕತ್ತರಿಸಿ ಕೊಲೆ ಮಾಡಿದ್ದ. </p>.<p>ಪುಟ್ಟರಾಜು ಲೇವಾದೇವಿ ವ್ಯವಹಾರವನ್ನೂ ಮಾಡುತ್ತಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಇತ್ತು.</p>.<p>ಶಫಿಉಲ್ಲಾ ತಾಲ್ಲೂಕಿನ ಹೊನ್ನವಳ್ಳಿ ಬ್ಯಾಂಕ್ನಲ್ಲಿ ಒಡವೆಗಳನ್ನು ಅಡವಿಟ್ಟಿದ್ದು, ಅದನ್ನು ಬಿಡಿಸಿಕೊಳ್ಳಲೆಂದು ಇಬ್ಬರೂ ಬೀರೂರಿನಿಂದ ಜೊತೆಯಾಗಿ ಬಂದಿದ್ದರು. ಮಾರ್ಗಮಧ್ಯೆ ಶಫಿಉಲ್ಲಾ ತೋಟದ ಕೆಲಸಕ್ಕೆ ಎಂದು ಪುಟ್ಟರಾಜು ಬಳಿ ಹೇಳಿ ಮಾರಕಾಸ್ತ್ರಗಳನ್ನು ಖರೀದಿಸಿದ್ದ.</p>.<p>ಬೋವಿ ಕಾಲೊನಿ ಸಮೀಪ ಮೂತ್ರ ವಿಸರ್ಜನೆಗಾಗಿ ದ್ವಿಚಕ್ರ ವಾಹನ ನಿಲ್ಲಿಸಿದ್ದ ವೇಳೆ, ಮಾರಕಾಸ್ತ್ರದಿಂದ ಪುಟ್ಟರಾಜು ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>