<p><strong>ತಿಪಟೂರು:</strong> ತುಮಕೂರು–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ನಡೆಯುತ್ತಿದೆ. ಮೊದಲ ಹಂತದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಅದೇ ಭಾಗವನ್ನು ಮತ್ತೆ ಕಿತ್ತು ಮರು ಕಾಮಗಾರಿ ಪ್ರಾರಂಭಿಸಲಾಗಿದೆ. ಇದರ ನಡುವೆ ಅಲ್ಲಿನ ಕೆರೆಗೆ ನೀರು ಹೋಗುವ ಜಲಮಾರ್ಗವನ್ನು ತಡೆಗಟ್ಟಲಾಗಿದೆ.</p>.<p>ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದ ಕಾರಣ ಕೆರೆಕಟ್ಟೆಗೆ ನೀರು ಹರಿಯದೆ ನಿಂತ ಪರಿಣಾಮ ರಸ್ತೆ ಕೆಸರುಗದ್ದೆಯಂತೆ ಆಗಿದೆ.</p>.<p>ಇಲ್ಲಿನ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಅನೇಕ ವಾಹನಗಳು ಈ ರಸ್ತೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಿವೆ. ಸ್ಥಳೀಯರು ದಿನನಿತ್ಯ ಭೀತಿಯೊಂದಿಗೆ ಸಂಚರಿಸುವಂತಾಗಿದೆ.</p>.<p>ಹೆದ್ದಾರಿ ಕಾಮಗಾರಿ ಅಭಿವೃದ್ಧಿಗಿಂತ ಹೆಚ್ಚು ಕಷ್ಟಗಳನ್ನು ತಂದಿದೆ. ಯೋಜನೆಯ ಸಮಯ ಪಾಲನೆ, ಪಾದಚಾರಿಗಳಿಗೆ ಸಂಚಾರದ ವ್ಯವಸ್ಥೆಗೆ ತೊಂದರೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಇಲ್ಲದೆ ಪದೇ ಪದೇ ರಸ್ತೆ ಅಗೆಯಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಗ್ರಾಮಸ್ಥ ಕೇಶವ್ ಮಾತನಾಡಿ, ಪೊಲೀಸ್ ಇಲಾಖೆ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಾಗೂ ಶಾಸಕ ಮತ್ತು ಸಂಸದರಿಗೂ ಕಾಮಗಾರಿಯ ಅವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತುಮಕೂರು–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ನಡೆಯುತ್ತಿದೆ. ಮೊದಲ ಹಂತದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಅದೇ ಭಾಗವನ್ನು ಮತ್ತೆ ಕಿತ್ತು ಮರು ಕಾಮಗಾರಿ ಪ್ರಾರಂಭಿಸಲಾಗಿದೆ. ಇದರ ನಡುವೆ ಅಲ್ಲಿನ ಕೆರೆಗೆ ನೀರು ಹೋಗುವ ಜಲಮಾರ್ಗವನ್ನು ತಡೆಗಟ್ಟಲಾಗಿದೆ.</p>.<p>ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದ ಕಾರಣ ಕೆರೆಕಟ್ಟೆಗೆ ನೀರು ಹರಿಯದೆ ನಿಂತ ಪರಿಣಾಮ ರಸ್ತೆ ಕೆಸರುಗದ್ದೆಯಂತೆ ಆಗಿದೆ.</p>.<p>ಇಲ್ಲಿನ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಅನೇಕ ವಾಹನಗಳು ಈ ರಸ್ತೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಿವೆ. ಸ್ಥಳೀಯರು ದಿನನಿತ್ಯ ಭೀತಿಯೊಂದಿಗೆ ಸಂಚರಿಸುವಂತಾಗಿದೆ.</p>.<p>ಹೆದ್ದಾರಿ ಕಾಮಗಾರಿ ಅಭಿವೃದ್ಧಿಗಿಂತ ಹೆಚ್ಚು ಕಷ್ಟಗಳನ್ನು ತಂದಿದೆ. ಯೋಜನೆಯ ಸಮಯ ಪಾಲನೆ, ಪಾದಚಾರಿಗಳಿಗೆ ಸಂಚಾರದ ವ್ಯವಸ್ಥೆಗೆ ತೊಂದರೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಇಲ್ಲದೆ ಪದೇ ಪದೇ ರಸ್ತೆ ಅಗೆಯಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಗ್ರಾಮಸ್ಥ ಕೇಶವ್ ಮಾತನಾಡಿ, ಪೊಲೀಸ್ ಇಲಾಖೆ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಾಗೂ ಶಾಸಕ ಮತ್ತು ಸಂಸದರಿಗೂ ಕಾಮಗಾರಿಯ ಅವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>