<p>ತಿಪಟೂರು: ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಬೆಂಕಿ ಅವಘಡದಲ್ಲಿ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವೈಯಕ್ತಿಕ ಪರಿಹಾರ ನೀಡುವುದಾಗಿ ತಿಳಿಸಿದರು.</p>.<p>ಏಪ್ರಿಲ್ 19ರಂದು ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಣ್ಣ ತಿಮ್ಮಯ್ಯ ಮತ್ತು ವೆಂಕಟರಮಣೇಗೌಡ ಅವರ ಮನೆ ಬೆಂಕಿಗಾಹುತಿಯಾಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಎರಡು ಕುಟುಂಬಗಳಿಗೆ ತಲಾ ₹1.5 ಲಕ್ಷ ನೀಡುವುದಾಗಿ ತಿಳಿಸಿದರು.</p>.<p>ಕೋಟೆನಾಯಕನಹಳ್ಳಿ ಗ್ರಾಮದಲ್ಲಿ ನಡೆದ ಬನಶಂಕರಿ ರಥೋತ್ಸವ, ತಾಲ್ಲೂಕಿನ ಶಾರದನಗರ ಹಾಗೂ ಹೊನ್ನವಳ್ಳಿಯಲ್ಲಿ ಪ್ರಗತಿಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಅಧಿಕಾರಿಗಳೊಡನೆ ವೀಕ್ಷಿಸಿ, ಗುರುಕುಲಾನಂದಶ್ರಮ ಹಾಗೂ ರಂಗಾಪುರ ಮಠಕ್ಕೆ ಭೇಟಿ ನೀಡಿದರು.</p>.<p>ತಹಶೀಲ್ದಾರ್ ಮೋಹನ್ ಕುಮಾರ್, ಸೋಮನಾಥ್ಗೌಡ, ಚಂದ್ರಶೇಖರ್, ಶಶಿಕಿರಣ್, ಆಯರಹಳ್ಳಿ ಶಂಕರಪ್ಪ, ಕೆರೆಗೋಡಿ ಸಂತೋಷ್, ರಾಮ್ ಮೋಹನ್, ಬಿಸಲೇಹಳ್ಳಿ ಜಗದೀಶ್, ಹರೀಸಮುದ್ರ ಗಂಗಾಧರ್, ಹುಣಸೇಘಟ್ಟ ಪ್ರಕಾಶ್, ಶಶಿಕಿರಣ್ ಹಸ್ತ, ನೊಣವಿನಕೆರೆ ರಾಕೇಶ್, ವಿಕಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-17-588235327</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಬೆಂಕಿ ಅವಘಡದಲ್ಲಿ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವೈಯಕ್ತಿಕ ಪರಿಹಾರ ನೀಡುವುದಾಗಿ ತಿಳಿಸಿದರು.</p>.<p>ಏಪ್ರಿಲ್ 19ರಂದು ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಣ್ಣ ತಿಮ್ಮಯ್ಯ ಮತ್ತು ವೆಂಕಟರಮಣೇಗೌಡ ಅವರ ಮನೆ ಬೆಂಕಿಗಾಹುತಿಯಾಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಎರಡು ಕುಟುಂಬಗಳಿಗೆ ತಲಾ ₹1.5 ಲಕ್ಷ ನೀಡುವುದಾಗಿ ತಿಳಿಸಿದರು.</p>.<p>ಕೋಟೆನಾಯಕನಹಳ್ಳಿ ಗ್ರಾಮದಲ್ಲಿ ನಡೆದ ಬನಶಂಕರಿ ರಥೋತ್ಸವ, ತಾಲ್ಲೂಕಿನ ಶಾರದನಗರ ಹಾಗೂ ಹೊನ್ನವಳ್ಳಿಯಲ್ಲಿ ಪ್ರಗತಿಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಅಧಿಕಾರಿಗಳೊಡನೆ ವೀಕ್ಷಿಸಿ, ಗುರುಕುಲಾನಂದಶ್ರಮ ಹಾಗೂ ರಂಗಾಪುರ ಮಠಕ್ಕೆ ಭೇಟಿ ನೀಡಿದರು.</p>.<p>ತಹಶೀಲ್ದಾರ್ ಮೋಹನ್ ಕುಮಾರ್, ಸೋಮನಾಥ್ಗೌಡ, ಚಂದ್ರಶೇಖರ್, ಶಶಿಕಿರಣ್, ಆಯರಹಳ್ಳಿ ಶಂಕರಪ್ಪ, ಕೆರೆಗೋಡಿ ಸಂತೋಷ್, ರಾಮ್ ಮೋಹನ್, ಬಿಸಲೇಹಳ್ಳಿ ಜಗದೀಶ್, ಹರೀಸಮುದ್ರ ಗಂಗಾಧರ್, ಹುಣಸೇಘಟ್ಟ ಪ್ರಕಾಶ್, ಶಶಿಕಿರಣ್ ಹಸ್ತ, ನೊಣವಿನಕೆರೆ ರಾಕೇಶ್, ವಿಕಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-17-588235327</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>