<p><strong>ತಿಪಟೂರು:</strong> ತಾಲ್ಲೂಕಿನ ಕಸಬಾ ಹೋಬಳಿಯ ಜೈಪುರ ರಸ್ತೆ ಸಮೀಪದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ನಗರದ ಗುಜರಿ ವ್ಯಾಪಾರಿ ಕೊಲೆ ನಡೆದಿದೆ.</p>.ತಿಪಟೂರು ನಗರದ ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ .<p>ತಿಪಟೂರು ಗಾಂಧಿನಗರ ನಿವಾಸಿ ಮನ್ಸೂರ್ ಪಾಶ (31) ಕೊಲೆಯಾದವರು. ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು.</p><p>ಮಾರ್ಚ್ 4ರಂದು ವ್ಯಾಪಾರದ ನಿಮಿತ್ತ ಮನ್ಸೂರ್ ಪಾಶ ಹಳ್ಳಿಗಳ ಕಡೆಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಕಾರಣ ಅವರ ಕುಟುಂಬದವರು ಮೊಬೈಲ್ಗೆ ಕರೆ ಮಾಡಿದರೂ ಸ್ವೀಕರಿಸಿಲ್ಲ. ಇದರಿಂದ ಆತಂಕಗೊಂಡು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p><p>ಪೊಲೀಸರು ತನಿಖೆ ನಡೆಸಿದ್ದು, ಗುರುವಾರ ರಂಗಾಪುರ– ಜೈಪುರ ರಸ್ತೆ ಸಮೀಪದ ಚಿಕ್ಕಕೊಟ್ಟಗಿಹಳ್ಳಿ ಬಳಿ ಮನ್ಸೂರ್ ಅವರಿಗೆ ಸೇರಿದ ಆಟೊ ರಿಕ್ಷಾ ಪತ್ತೆಯಾಗಿದೆ. ಅಲ್ಲಿಂದ ಸ್ವಲ್ಪ ದೂರದ ತೋಟದಲ್ಲಿ ಮನ್ಸೂರ್ ಪಾಶ ಶವ ಪತ್ತೆಯಾಗಿದೆ.</p>.ತಿಪಟೂರು: ಕೊಲೆ ಆರೋಪಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನ ಕಸಬಾ ಹೋಬಳಿಯ ಜೈಪುರ ರಸ್ತೆ ಸಮೀಪದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ನಗರದ ಗುಜರಿ ವ್ಯಾಪಾರಿ ಕೊಲೆ ನಡೆದಿದೆ.</p>.ತಿಪಟೂರು ನಗರದ ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ .<p>ತಿಪಟೂರು ಗಾಂಧಿನಗರ ನಿವಾಸಿ ಮನ್ಸೂರ್ ಪಾಶ (31) ಕೊಲೆಯಾದವರು. ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು.</p><p>ಮಾರ್ಚ್ 4ರಂದು ವ್ಯಾಪಾರದ ನಿಮಿತ್ತ ಮನ್ಸೂರ್ ಪಾಶ ಹಳ್ಳಿಗಳ ಕಡೆಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಕಾರಣ ಅವರ ಕುಟುಂಬದವರು ಮೊಬೈಲ್ಗೆ ಕರೆ ಮಾಡಿದರೂ ಸ್ವೀಕರಿಸಿಲ್ಲ. ಇದರಿಂದ ಆತಂಕಗೊಂಡು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p><p>ಪೊಲೀಸರು ತನಿಖೆ ನಡೆಸಿದ್ದು, ಗುರುವಾರ ರಂಗಾಪುರ– ಜೈಪುರ ರಸ್ತೆ ಸಮೀಪದ ಚಿಕ್ಕಕೊಟ್ಟಗಿಹಳ್ಳಿ ಬಳಿ ಮನ್ಸೂರ್ ಅವರಿಗೆ ಸೇರಿದ ಆಟೊ ರಿಕ್ಷಾ ಪತ್ತೆಯಾಗಿದೆ. ಅಲ್ಲಿಂದ ಸ್ವಲ್ಪ ದೂರದ ತೋಟದಲ್ಲಿ ಮನ್ಸೂರ್ ಪಾಶ ಶವ ಪತ್ತೆಯಾಗಿದೆ.</p>.ತಿಪಟೂರು: ಕೊಲೆ ಆರೋಪಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>