<p>ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಶಿವರಾಮನಹಳ್ಳಿಯಲ್ಲಿ ಮದುವೆ ಊಟ ಸೇವಿಸಿದ್ದ 15 ಮಂದಿ ಅಸ್ವಸ್ಥಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಗ್ರಾಮದ 14 ಮಂದಿಗೆ ಅಲ್ಲಿಯೇ ತಾತ್ಕಾಲಿಕ ವೈದ್ಯಕೀಯ ಕೆಂದ್ರ ತೆರೆದು, ಸ್ಥಳದಲ್ಲೇ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಕೇಶವ ಗ್ರಾಮಕ್ಕೆ ಭೇಟಿ ನೀಡಿದ್ದರು. ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಪರಿಶೀಲನೆ ನಡೆಸಿ ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ, ಶಾಸಕ ಕೆ.ಷಡಕ್ಷರಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಕೇಶವ ಮಾತನಾಡಿ, ಶಿವರಾಮನಹಳ್ಳಿಯಲ್ಲಿ ಸೋಮವಾರ ನಡೆದ ಮದುವೆಯ ದೇವತಾಕಾರ್ಯದ ಮಧ್ಯಾಹ್ನ ಊಟದ ಆಹಾರದಲ್ಲಿ ವ್ಯತ್ಯಾಸವಾಗಿರುವುದು ಕಂಡುಬಂದಿದೆ. ಆದ್ದರಿಂದ ಗ್ರಾಮದಲ್ಲಿಯೇ ಒಂದು ವಾರ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ವೈದ್ಯರನ್ನು ನಿಯೋಜಿಸಲಾಗಿದೆ. ಯಾರಿಗೂ ಗಂಭೀರವಾಗಿಲ್ಲ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-17-2004261041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಶಿವರಾಮನಹಳ್ಳಿಯಲ್ಲಿ ಮದುವೆ ಊಟ ಸೇವಿಸಿದ್ದ 15 ಮಂದಿ ಅಸ್ವಸ್ಥಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಗ್ರಾಮದ 14 ಮಂದಿಗೆ ಅಲ್ಲಿಯೇ ತಾತ್ಕಾಲಿಕ ವೈದ್ಯಕೀಯ ಕೆಂದ್ರ ತೆರೆದು, ಸ್ಥಳದಲ್ಲೇ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಕೇಶವ ಗ್ರಾಮಕ್ಕೆ ಭೇಟಿ ನೀಡಿದ್ದರು. ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಪರಿಶೀಲನೆ ನಡೆಸಿ ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ, ಶಾಸಕ ಕೆ.ಷಡಕ್ಷರಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಚನ್ನಕೇಶವ ಮಾತನಾಡಿ, ಶಿವರಾಮನಹಳ್ಳಿಯಲ್ಲಿ ಸೋಮವಾರ ನಡೆದ ಮದುವೆಯ ದೇವತಾಕಾರ್ಯದ ಮಧ್ಯಾಹ್ನ ಊಟದ ಆಹಾರದಲ್ಲಿ ವ್ಯತ್ಯಾಸವಾಗಿರುವುದು ಕಂಡುಬಂದಿದೆ. ಆದ್ದರಿಂದ ಗ್ರಾಮದಲ್ಲಿಯೇ ಒಂದು ವಾರ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ವೈದ್ಯರನ್ನು ನಿಯೋಜಿಸಲಾಗಿದೆ. ಯಾರಿಗೂ ಗಂಭೀರವಾಗಿಲ್ಲ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-17-2004261041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>