<p><strong>ತುಮಕೂರು:</strong> ತಂತ್ರಜ್ಞಾನ ದಿನದಿಂದ ದಿನಕ್ಕೆ ಆವಿಷ್ಕಾರಗೊಳ್ಳುತ್ತಿದ್ದು, ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಗ್ರಾಹಕರಿಗೆ ಸೇವೆ ಸಲ್ಲಿಸುವಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಲಿಮಿಟೆಡ್ (ಟಿಎಂಸಿಸಿ) ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಲಿಮಿಟೆಡ್ನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ, 15ನೇ ವಾರ್ಷಿಕ ಸರ್ವ ಸದಸ್ಯರ ಸಭೆ, ಬ್ಯಾಂಕ್ನ ಅತ್ಯುತ್ತಮ ಗ್ರಾಹಕರಿಗೆ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನವನ್ನೂ ಸಂಸ್ಥೆ ಅಳವಡಿಸಿಕೊಂಡಿದೆ. ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡಿ ಇತರ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಹಕಾರಿ ಕಾಯ್ದೆಯಲ್ಲಿ ಮಾಡಲಾದ ಬದಲಾವಣೆಯಿಂದ ಸಹಕಾರ ಸಂಘಗಳು ಜನರನ್ನು ತಲುಪಿವೆ ಎಂದು ತಿಳಿಸಿದರು.</p>.<p>ಟಿಎಂಸಿಸಿ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಮಾತನಾಡಿ, ‘ಕೋವಿಡ್ನಿಂದಾಗಿ ಬ್ಯಾಂಕ್ ವಹಿವಾಟು ಮೊದಲಿನಂತೆ ನಡೆಯಲು ಸಾಧ್ಯವಾಗಿಲ್ಲ. ಗ್ರಾಹಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸಿ ಕೊಳ್ಳಲಾಗುತ್ತಿದೆ. ಡಿಜಿಟಲ್ಗಿಂತ ಉನ್ನತವಾಗಿರುವ ತಂತ್ರಾಂಶ ಅಳವಡಿಸಿಕೊಂಡಿರುವ ಮೊದಲ ಸಹಕಾರಿ ಬ್ಯಾಂಕ್ ನಮ್ಮದಾಗಿದೆ’ ಎಂದು ಹೆಮ್ಮೆಯಿಂದ ಹೇಳಿದರು.</p>.<p>ಗ್ರಾಹಕರಿಗೆ ಸುಲಭವಾಗಿ ಬ್ಯಾಂಕಿಂಗ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಬಳಕೆ ಪ್ರಾರಂಭಿಸಲಾಗಿದೆ. ಜಯ ತಂತ್ರಾಂಶದಿಂದ ಗ್ರಾಹಕರು 24X7 ಸೇವೆ ಬಳಸಿಕೊಳ್ಳುತ್ತಿದ್ದಾರೆ ಎಂದರು.</p>.<p>ಶಾಸಕ ಜ್ಯೋತಿಗಣೇಶ್, ‘ಸಹಕಾರಿ ಸಂಸ್ಥೆಗಳು ತಂತ್ರಜ್ಞಾನ ಅಳವಡಿಸಿಕೊಳ್ಳಲು ಹಿಂದುಳಿದರೆ ನಶಿಸುವ ಅಪಾಯವನ್ನು ಎದುರಿಸಬೇಕಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಗ್ರಾಹಕರ ನಡುವಿನ ಬಾಂಧವ್ಯ ಕಡಿಮೆಯಾಗುತ್ತಿದ್ದು, ಈ ಅವಕಾಶ ಬಳಸಿಕೊಂಡು ಉತ್ತಮ ಸೇವೆ ಒದಗಿಸಲು ಮುಂದಾಗಬೇಕು’ ಎಂದು ಸಲಹೆ ಮಾಡಿದರು.</p>.<p>ಬಿಜೆಪಿ ಮುಖಂಡ ಸೊಗಡು ಶಿವಣ್ಣ, ಟಿಎಂಸಿಸಿ ಉಪಾಧ್ಯಕ್ಷ ಟಿ.ಎ.ಶ್ರೀಕರ, ಸಿಇಒ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಂತ್ರಜ್ಞಾನ ದಿನದಿಂದ ದಿನಕ್ಕೆ ಆವಿಷ್ಕಾರಗೊಳ್ಳುತ್ತಿದ್ದು, ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ಗ್ರಾಹಕರಿಗೆ ಸೇವೆ ಸಲ್ಲಿಸುವಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಲಿಮಿಟೆಡ್ (ಟಿಎಂಸಿಸಿ) ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಲಿಮಿಟೆಡ್ನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ, 15ನೇ ವಾರ್ಷಿಕ ಸರ್ವ ಸದಸ್ಯರ ಸಭೆ, ಬ್ಯಾಂಕ್ನ ಅತ್ಯುತ್ತಮ ಗ್ರಾಹಕರಿಗೆ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನವನ್ನೂ ಸಂಸ್ಥೆ ಅಳವಡಿಸಿಕೊಂಡಿದೆ. ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡಿ ಇತರ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಹಕಾರಿ ಕಾಯ್ದೆಯಲ್ಲಿ ಮಾಡಲಾದ ಬದಲಾವಣೆಯಿಂದ ಸಹಕಾರ ಸಂಘಗಳು ಜನರನ್ನು ತಲುಪಿವೆ ಎಂದು ತಿಳಿಸಿದರು.</p>.<p>ಟಿಎಂಸಿಸಿ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಮಾತನಾಡಿ, ‘ಕೋವಿಡ್ನಿಂದಾಗಿ ಬ್ಯಾಂಕ್ ವಹಿವಾಟು ಮೊದಲಿನಂತೆ ನಡೆಯಲು ಸಾಧ್ಯವಾಗಿಲ್ಲ. ಗ್ರಾಹಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸಿ ಕೊಳ್ಳಲಾಗುತ್ತಿದೆ. ಡಿಜಿಟಲ್ಗಿಂತ ಉನ್ನತವಾಗಿರುವ ತಂತ್ರಾಂಶ ಅಳವಡಿಸಿಕೊಂಡಿರುವ ಮೊದಲ ಸಹಕಾರಿ ಬ್ಯಾಂಕ್ ನಮ್ಮದಾಗಿದೆ’ ಎಂದು ಹೆಮ್ಮೆಯಿಂದ ಹೇಳಿದರು.</p>.<p>ಗ್ರಾಹಕರಿಗೆ ಸುಲಭವಾಗಿ ಬ್ಯಾಂಕಿಂಗ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಬಳಕೆ ಪ್ರಾರಂಭಿಸಲಾಗಿದೆ. ಜಯ ತಂತ್ರಾಂಶದಿಂದ ಗ್ರಾಹಕರು 24X7 ಸೇವೆ ಬಳಸಿಕೊಳ್ಳುತ್ತಿದ್ದಾರೆ ಎಂದರು.</p>.<p>ಶಾಸಕ ಜ್ಯೋತಿಗಣೇಶ್, ‘ಸಹಕಾರಿ ಸಂಸ್ಥೆಗಳು ತಂತ್ರಜ್ಞಾನ ಅಳವಡಿಸಿಕೊಳ್ಳಲು ಹಿಂದುಳಿದರೆ ನಶಿಸುವ ಅಪಾಯವನ್ನು ಎದುರಿಸಬೇಕಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಗ್ರಾಹಕರ ನಡುವಿನ ಬಾಂಧವ್ಯ ಕಡಿಮೆಯಾಗುತ್ತಿದ್ದು, ಈ ಅವಕಾಶ ಬಳಸಿಕೊಂಡು ಉತ್ತಮ ಸೇವೆ ಒದಗಿಸಲು ಮುಂದಾಗಬೇಕು’ ಎಂದು ಸಲಹೆ ಮಾಡಿದರು.</p>.<p>ಬಿಜೆಪಿ ಮುಖಂಡ ಸೊಗಡು ಶಿವಣ್ಣ, ಟಿಎಂಸಿಸಿ ಉಪಾಧ್ಯಕ್ಷ ಟಿ.ಎ.ಶ್ರೀಕರ, ಸಿಇಒ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>