ತಾಲ್ಲೂಕು ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಾಗ ತಲಾ 20 ತಿಂಗಳ ಅಧಿಕಾರ ಸೂತ್ರ ರಚಿಸಿ, ಮೂವರಿಗೆ ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಮೊದಲ ಅವಧಿಗೆ ವಡ್ಡರಹಳ್ಳಿ ಕ್ಷೇತ್ರದ ಗಂಗಾಂಜನೇಯ (ಪರಿಶಿಷ್ಟ ಜಾತಿ) ಅವರನ್ನು ಆಯ್ಕೆ ಮಾಡಲಾಗಿತ್ತು. ನಂತರದ ಅವಧಿಗೆ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಊರುಕೆರೆ ಕ್ಷೇತ್ರದ ಕವಿತಾ ರಮೇಶ್ ಅವರಿಗೆ ಬಿಟ್ಟುಕೊಡಲು ನಿರ್ಧರಿಸಲಾಗಿತ್ತು.