<p><strong>ಚಿಕ್ಕನಾಯಕನಹಳ್ಳಿ:</strong> ಮಾದಿಗರು (ಎಡಗೈ) ಮತ್ತು ಛಲವಾದಿ (ಬಲಗೈ) ಜಾತಿಗಳನ್ನು ಮಾತ್ರ ಪರಿಶಿಷ್ಟ ಜಾತಿ ಮೀಸಲಾತಿ ಅಡಿ ಪರಿಗಣಿಸುವ೦ತೆ ಸುಪ್ರೀಂಕೋರ್ಟ್ ಆದೇಶಿಸಿದ್ದು ಇದನ್ನು ಯಥಾವತ್ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ಮಾದಿಗ ದ೦ಡೋರ ಹಾಗೂ ಛಲವಾದಿ ಸಮಿತಿ ಉಪ ತಹಶೀಲ್ದಾರ್ ಮೋಹನ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.</p>.<p>ಸುಪ್ರೀಂಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಮಾದಿಗರು (ಎಡಗೈ) ಛಲವಾದಿ (ಬಲಗೈ) ಸಮುದಾಯಕ್ಕೆ ಮಾತ್ರ ಇರುವ೦ತೆ ನ್ಯಾಯಾಲಯವು ಫೆಬ್ರುವರಿಯಲ್ಲಿ ಆದೇಶಿಸಿದೆ. ಈ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಮಿತಿಯು ಸರ್ಕಾರವನ್ನು ಒತ್ತಾಯಿಸಿದೆ. ಸಮಾಜದಲ್ಲಿ ಅಸ್ಪೃಶ್ಯರಾಗಿ ಬದುಕುತ್ತಿರುವ ಈ ಎರಡು ಸಮುದಾಯಗಳನ್ನು ಮಾತ್ರ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಪರಿಗಣಿಸಬೇಕು ಎಂದು ಸಮಿತಿ ಸದಸ್ಯರು ಮನವಿ ಮಾಡಿದರು.</p>.<p>ಮಾದಿಗ ದಂಡೋರ ಸಮಿತಿ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ, ಯಾರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ ಹಾಗೂ ಆರ್ಥಿಕವಾಗಿ ಅಸ್ಪೃಶ್ಯರಾಗಿದ್ದಾರೆ ಅವರಿಗೆ ಮೀಸಲಾತಿ ಕೊಡಬಹುದು ಎಂದು ನ್ಯಾಯಾಲಯ ಹೇಳಿದೆ. ಎಸ್ಸಿ, ಎಸ್ಟಿ ಕಮಿಷನ್ ಕೂಡ ಈ ತೀರ್ಮಾನ ಮಾಡಿದೆ. ಪರಿಶಿಷ್ಟ ಜಾತಿಯಲ್ಲಿನ ಅಸ್ಪೃಶ್ಯರನ್ನು ಸೇರಿಸಿ ಅವರಿಗೆ ಮೀಸಲಾತಿ ಕೊಡಬೇಕು ಎಂದು ಈ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.</p>.<p>ಮುಖಂಡರಾದ ಗೋ.ನಿ.ವಸಂತ್ ಕುಮಾರ್, ಜೆ.ಸಿ.ಪುರ ಗೋವಿಂದರಾಜು, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಮಾದಿಗರು (ಎಡಗೈ) ಮತ್ತು ಛಲವಾದಿ (ಬಲಗೈ) ಜಾತಿಗಳನ್ನು ಮಾತ್ರ ಪರಿಶಿಷ್ಟ ಜಾತಿ ಮೀಸಲಾತಿ ಅಡಿ ಪರಿಗಣಿಸುವ೦ತೆ ಸುಪ್ರೀಂಕೋರ್ಟ್ ಆದೇಶಿಸಿದ್ದು ಇದನ್ನು ಯಥಾವತ್ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ಮಾದಿಗ ದ೦ಡೋರ ಹಾಗೂ ಛಲವಾದಿ ಸಮಿತಿ ಉಪ ತಹಶೀಲ್ದಾರ್ ಮೋಹನ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.</p>.<p>ಸುಪ್ರೀಂಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಮಾದಿಗರು (ಎಡಗೈ) ಛಲವಾದಿ (ಬಲಗೈ) ಸಮುದಾಯಕ್ಕೆ ಮಾತ್ರ ಇರುವ೦ತೆ ನ್ಯಾಯಾಲಯವು ಫೆಬ್ರುವರಿಯಲ್ಲಿ ಆದೇಶಿಸಿದೆ. ಈ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಮಿತಿಯು ಸರ್ಕಾರವನ್ನು ಒತ್ತಾಯಿಸಿದೆ. ಸಮಾಜದಲ್ಲಿ ಅಸ್ಪೃಶ್ಯರಾಗಿ ಬದುಕುತ್ತಿರುವ ಈ ಎರಡು ಸಮುದಾಯಗಳನ್ನು ಮಾತ್ರ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಪರಿಗಣಿಸಬೇಕು ಎಂದು ಸಮಿತಿ ಸದಸ್ಯರು ಮನವಿ ಮಾಡಿದರು.</p>.<p>ಮಾದಿಗ ದಂಡೋರ ಸಮಿತಿ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ, ಯಾರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ ಹಾಗೂ ಆರ್ಥಿಕವಾಗಿ ಅಸ್ಪೃಶ್ಯರಾಗಿದ್ದಾರೆ ಅವರಿಗೆ ಮೀಸಲಾತಿ ಕೊಡಬಹುದು ಎಂದು ನ್ಯಾಯಾಲಯ ಹೇಳಿದೆ. ಎಸ್ಸಿ, ಎಸ್ಟಿ ಕಮಿಷನ್ ಕೂಡ ಈ ತೀರ್ಮಾನ ಮಾಡಿದೆ. ಪರಿಶಿಷ್ಟ ಜಾತಿಯಲ್ಲಿನ ಅಸ್ಪೃಶ್ಯರನ್ನು ಸೇರಿಸಿ ಅವರಿಗೆ ಮೀಸಲಾತಿ ಕೊಡಬೇಕು ಎಂದು ಈ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.</p>.<p>ಮುಖಂಡರಾದ ಗೋ.ನಿ.ವಸಂತ್ ಕುಮಾರ್, ಜೆ.ಸಿ.ಪುರ ಗೋವಿಂದರಾಜು, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>