ತುಮಕೂರು: ಜಿಲ್ಲಾ ವೀರಶೈವ –ಲಿಂಗಾಯತ ಸೇವಾ ಸಮಿತಿಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಭಾನುವಾರ ( ಜುಲೈ 14) ಬೆಳಿಗ್ಗೆ 10 ಗಂಟೆಗೆ ನಗರದ ಎಸ್ಐಟಿ ಬಿರ್ಲಾ ಸಭಾಂಗಣದಲ್ಲಿ ಆಯೋಜಿಸಿದೆ.
ಮಾಜಿ ಸಚಿವ ವಿ.ಸೋಮಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಜಿ.ಎಸ್. ಬಸವರಾಜು ಅವರನ್ನು ಸನ್ಮಾನಿಸಲಾಗುತ್ತಿದೆ.
ಆಂಧ್ರಪ್ರದೇಶದ ಉರುಗಾದ್ರಿ ಗವಿಮಠದ ಚನ್ನಬಸವ ರಾಜೇಂದ್ರ ಸ್ವಾಮೀಜಿ, ಸಿದ್ಧರಬೆಟ್ಟದ ಬಾಳೆಹೊನ್ನೂರು ಶಾಖಾಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್ ವಹಿಸಲಿದ್ದಾರೆ.