ತುಮಕೂರು: ನಗರದ ಹೊರವಲಯದ ಬೆಳಗುಂಬ ಗ್ರಾಮ ಪಂಚಾಯಿತಿ ಮುಂಭಾಗದ ಮುಖ್ಯ ರಸ್ತೆಯಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ ನೇತ್ರಾ ಎಂಬ ಐದು ವರ್ಷದ ಬಾಲಕಿ ಮೇಲೆ ಹರಿದು ಬಾಲಕಿಯ ಎರಡೂ ಕಾಲುಗಳಿಗೆ ತೀವ್ರ ಗಾಯವಾಗಿದೆ. ಬಾಲಕಿಯನ್ನು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿ ತಂದೆ ಅರುಣ್ ಗಾರೆ ಕೆಲಸ, ತಾಯಿ ಭಾಗ್ಯಮ್ಮ ಮನೆ ಗೆಲಸ ಮಾಡುತ್ತಾರೆ. ಸಂಜೆ ರಸ್ತೆಯಲ್ಲಿ ನುಗ್ಗಿಬಂದ ಬಸ್ ಬಾಲಕಿಗೆ ಡಿಕ್ಕಿ ಹೊಡೆದು ಕಾಲಿನ ಮೇಲೆ ಹರಿದಿದೆ ಎಂದು ಗ್ರಾಮಸ್ಥರು ಹೇಳಿದರು.
ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ಸಿನ ಗಾಜುಗಳು ಪುಡಿಯಾಗಿವೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.