<p><strong>ಕೊರಟಗೆರೆ: </strong>ಇಲ್ಲಿನ ನಾಲ್ಕನೇ ವಾರ್ಡಿಗೆ ಸೋಮವಾರ ನಡೆದ ಉಪ ಚುನಾವಣೆ ಶಾಂತಿಯುತವಾಗಿತ್ತು. ಕಾಂಗ್ರೆಸ್ನ ಎನ್.ಕೆ. ನರಸಿಂಹಪ್ಪ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.</p>.<p>ಒಟ್ಟು 1,283 ಮತದಾರರಪೈಕಿ 1,048 ಮಂದಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಅದರಲ್ಲಿ 499 ಮಹಿಳೆಯರು ಮತ್ತು 549 ಪುರುಷರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಬಿರುಸಿನ ಮತದಾನ ನಡೆಯಿತು. ಮಧ್ಯಾಹ್ನ ವಿಪರೀತವಾದ ಬಿಸಿಲು ಇದ್ದ ಕಾರಣ ಮತದಾನ ಮಂದಗತಿಯಲ್ಲಿ ಸಾಗಿತ್ತು.</p>.<p>ಮತ ಚಲಾಯಿಸಲು ಬರುತ್ತಿದ್ದ ಮತದಾರರನ್ನು ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮತಗಟ್ಟೆ ಹೊರಗಡೆ ನಿಂತು ದುಂಬಾಲು ಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮತಗಟ್ಟೆ ಸಮೀಪದ ದೂರದಲ್ಲಿ ಈ ಹಿಂದೆ ಸದಸ್ಯರಾಗಿ ಅಕಾಲಿಕ ಮರಣಕ್ಕೆ ತುತ್ತಾದ ನರಸಿಂಹಪ್ಪ ಅವರ ಫೋಟೊ ಇಟ್ಟಿದ್ದರಿಂದ ಜೆಡಿಎಸ್ ಕಾರ್ಯಕರ್ತರು ಅದನ್ನು ತೆಗೆಸುವಂತೆ ಒತ್ತಾಯಿಸಿದರು.</p>.<p>ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಇದರಿಂದ ಕೆಲಕಾಲ ಗೊಂದಲ ಉಂಟಾಯಿತು. ಚುನಾವಣಾ ಅಧಿಕಾರಿಗಳು ನರಸಿಂಹಪ್ಪ ಫೋಟೊವನ್ನು ತೆಗೆಸಿದ ಬಳಿಕ ಪರಿಸ್ಥಿತಿ ತಿಳಿಯಾಯಿತು. ಮಾರ್ಚ್31ರಂದು ಫಲಿತಾಂಶ ಘೋಷಣೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ: </strong>ಇಲ್ಲಿನ ನಾಲ್ಕನೇ ವಾರ್ಡಿಗೆ ಸೋಮವಾರ ನಡೆದ ಉಪ ಚುನಾವಣೆ ಶಾಂತಿಯುತವಾಗಿತ್ತು. ಕಾಂಗ್ರೆಸ್ನ ಎನ್.ಕೆ. ನರಸಿಂಹಪ್ಪ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.</p>.<p>ಒಟ್ಟು 1,283 ಮತದಾರರಪೈಕಿ 1,048 ಮಂದಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಅದರಲ್ಲಿ 499 ಮಹಿಳೆಯರು ಮತ್ತು 549 ಪುರುಷರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಬಿರುಸಿನ ಮತದಾನ ನಡೆಯಿತು. ಮಧ್ಯಾಹ್ನ ವಿಪರೀತವಾದ ಬಿಸಿಲು ಇದ್ದ ಕಾರಣ ಮತದಾನ ಮಂದಗತಿಯಲ್ಲಿ ಸಾಗಿತ್ತು.</p>.<p>ಮತ ಚಲಾಯಿಸಲು ಬರುತ್ತಿದ್ದ ಮತದಾರರನ್ನು ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮತಗಟ್ಟೆ ಹೊರಗಡೆ ನಿಂತು ದುಂಬಾಲು ಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮತಗಟ್ಟೆ ಸಮೀಪದ ದೂರದಲ್ಲಿ ಈ ಹಿಂದೆ ಸದಸ್ಯರಾಗಿ ಅಕಾಲಿಕ ಮರಣಕ್ಕೆ ತುತ್ತಾದ ನರಸಿಂಹಪ್ಪ ಅವರ ಫೋಟೊ ಇಟ್ಟಿದ್ದರಿಂದ ಜೆಡಿಎಸ್ ಕಾರ್ಯಕರ್ತರು ಅದನ್ನು ತೆಗೆಸುವಂತೆ ಒತ್ತಾಯಿಸಿದರು.</p>.<p>ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಇದರಿಂದ ಕೆಲಕಾಲ ಗೊಂದಲ ಉಂಟಾಯಿತು. ಚುನಾವಣಾ ಅಧಿಕಾರಿಗಳು ನರಸಿಂಹಪ್ಪ ಫೋಟೊವನ್ನು ತೆಗೆಸಿದ ಬಳಿಕ ಪರಿಸ್ಥಿತಿ ತಿಳಿಯಾಯಿತು. ಮಾರ್ಚ್31ರಂದು ಫಲಿತಾಂಶ ಘೋಷಣೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>