<p><strong>ತಿಪಟೂರು:</strong> ತಾಲ್ಲೂಕಿನಲ್ಲಿ ಮೊದಲ ಹಂತವಾಗಿ ಬಾಗುವಾಳು ಮುನಿಯಪ್ಪ ಆಲದಮರ ಪ್ರದೇಶದಲ್ಲಿ ಮೇವು ಬ್ಯಾಂಕ್ ಆರಂಭಿಸಲಾಯಿತು.</p>.<p>ತಹಶೀಲ್ದಾರ್ ಬಿ. ಆರತಿ ಮೇವು ವಿತರಣೆಗೆ ಚಾಲನೆ ನೀಡಿ ಮಾತನಾಡಿ, ತಾಲ್ಲೂಕಿನಲ್ಲಿ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ಹೊನ್ನವಳ್ಳಿ ಹೋಬಳಿಗೆ ವಿಶೇಷ ಗಮನ ಕೊಡಲಾಗಿದೆ. ಮೊದಲ ಹಂತದಲ್ಲಿ ಇಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿ ಪ್ರತಿ ಜಾನುವಾರಿಗೆ 5 ಕೆ.ಜಿ ಒಣ ಹುಲ್ಲನ್ನು ನೀಡಲಾಗುತ್ತಿದೆ. 15 ದಿನಗಳಿಗೆ ಆಗುವಷ್ಟು ಮೇವನ್ನು ಒಂದೇ ಬಾರಿಗೆ ನೀಡಲಾಗುತ್ತದೆ. ಪ್ರತಿ ಹೋಬಳಿಯಲ್ಲಿ ಕನಿಷ್ಠ ಎರಡು ಕಡೆ ಕಡೆ ಮೇವು ಬ್ಯಾಂಕ್ ತೆರೆಯಲಾಗುತ್ತದೆ. ಈಗಾಗಲೇ ತಾಲ್ಲೂಕಿನ ಎಲ್ಲ ಪಶು ಆಸ್ಪತ್ರೆಗಳಲ್ಲಿ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ ಎಂದರು.</p>.<p>ಮೇವು ಬ್ಯಾಂಕ್ ಸಮರ್ಪಕವಾಗಿ ನಡೆಯಲು ರೈತರು ಸಹಕರಿಸಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಬರದ ಹಿನ್ನೆಲೆಯಲ್ಲಿ ರೈತರಿಗೆ ನೆರವಾಗಬೇಕು ಎಂದು ತಿಳಿಸಿದರು.</p>.<p>ಪಶು ಸಂಗೋಪನೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನಲ್ಲಿ ಮೊದಲ ಹಂತವಾಗಿ ಬಾಗುವಾಳು ಮುನಿಯಪ್ಪ ಆಲದಮರ ಪ್ರದೇಶದಲ್ಲಿ ಮೇವು ಬ್ಯಾಂಕ್ ಆರಂಭಿಸಲಾಯಿತು.</p>.<p>ತಹಶೀಲ್ದಾರ್ ಬಿ. ಆರತಿ ಮೇವು ವಿತರಣೆಗೆ ಚಾಲನೆ ನೀಡಿ ಮಾತನಾಡಿ, ತಾಲ್ಲೂಕಿನಲ್ಲಿ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ಹೊನ್ನವಳ್ಳಿ ಹೋಬಳಿಗೆ ವಿಶೇಷ ಗಮನ ಕೊಡಲಾಗಿದೆ. ಮೊದಲ ಹಂತದಲ್ಲಿ ಇಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿ ಪ್ರತಿ ಜಾನುವಾರಿಗೆ 5 ಕೆ.ಜಿ ಒಣ ಹುಲ್ಲನ್ನು ನೀಡಲಾಗುತ್ತಿದೆ. 15 ದಿನಗಳಿಗೆ ಆಗುವಷ್ಟು ಮೇವನ್ನು ಒಂದೇ ಬಾರಿಗೆ ನೀಡಲಾಗುತ್ತದೆ. ಪ್ರತಿ ಹೋಬಳಿಯಲ್ಲಿ ಕನಿಷ್ಠ ಎರಡು ಕಡೆ ಕಡೆ ಮೇವು ಬ್ಯಾಂಕ್ ತೆರೆಯಲಾಗುತ್ತದೆ. ಈಗಾಗಲೇ ತಾಲ್ಲೂಕಿನ ಎಲ್ಲ ಪಶು ಆಸ್ಪತ್ರೆಗಳಲ್ಲಿ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ ಎಂದರು.</p>.<p>ಮೇವು ಬ್ಯಾಂಕ್ ಸಮರ್ಪಕವಾಗಿ ನಡೆಯಲು ರೈತರು ಸಹಕರಿಸಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಬರದ ಹಿನ್ನೆಲೆಯಲ್ಲಿ ರೈತರಿಗೆ ನೆರವಾಗಬೇಕು ಎಂದು ತಿಳಿಸಿದರು.</p>.<p>ಪಶು ಸಂಗೋಪನೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>