ತಹಶೀಲ್ದಾರ್ ಬಿ. ಆರತಿ ಮೇವು ವಿತರಣೆಗೆ ಚಾಲನೆ ನೀಡಿ ಮಾತನಾಡಿ, ತಾಲ್ಲೂಕಿನಲ್ಲಿ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ಹೊನ್ನವಳ್ಳಿ ಹೋಬಳಿಗೆ ವಿಶೇಷ ಗಮನ ಕೊಡಲಾಗಿದೆ. ಮೊದಲ ಹಂತದಲ್ಲಿ ಇಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿ ಪ್ರತಿ ಜಾನುವಾರಿಗೆ 5 ಕೆ.ಜಿ ಒಣ ಹುಲ್ಲನ್ನು ನೀಡಲಾಗುತ್ತಿದೆ. 15 ದಿನಗಳಿಗೆ ಆಗುವಷ್ಟು ಮೇವನ್ನು ಒಂದೇ ಬಾರಿಗೆ ನೀಡಲಾಗುತ್ತದೆ. ಪ್ರತಿ ಹೋಬಳಿಯಲ್ಲಿ ಕನಿಷ್ಠ ಎರಡು ಕಡೆ ಕಡೆ ಮೇವು ಬ್ಯಾಂಕ್ ತೆರೆಯಲಾಗುತ್ತದೆ. ಈಗಾಗಲೇ ತಾಲ್ಲೂಕಿನ ಎಲ್ಲ ಪಶು ಆಸ್ಪತ್ರೆಗಳಲ್ಲಿ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ ಎಂದರು.