ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಮಾತನಾಡಿ, ‘ಸತತ ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರವೇ ಬಲವಂತದ ವಸೂಲಿ ಕೈಬಿಟ್ಟು, ರೈತರ ಮನವೊಲಿಸಿ ಸಾಲ ವಸೂಲಿ ಮಾಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೂ ಪಿಎಲ್ಡಿ ಬ್ಯಾಂಕಿನವರು ರೈತನಿಗೆ ತಿಳುವಳಿಕೆ ಪತ್ರ ನೀಡದೆ, ಬ್ಯಾಂಕಿನ ಸಾಲ ಎಷ್ಟಿದೆ ಎಂದು ತಿಳಿಸದೆ ರೈತನ ಮನೆಬಾಗಿಲಿಗೆ ಹೋಗಿ ಕಾನೂನು ಬಾಹಿರವಾಗಿ ಟ್ರಾಕ್ಟರ್ ಜಪ್ತಿ ಮಾಡಿದ್ದಾರೆ’ ಎಂದು ಆರೋಪಿಸಿದರು.