<p><strong>ತುಮಕೂರು</strong>: ವ್ಯಾಪಾರಸ್ಥ ಕಾರ್ಮಿಕರಿಗೆ ₹5 ಲಕ್ಷದವರೆಗೆ ಆರೋಗ್ಯ ವಿಮೆ, 60 ವರ್ಷ ದಾಟಿದ ವ್ಯಾಪಾರಸ್ಥರಿಗೆ ₹3 ಸಾವಿರ ಪಿಂಚಣಿ ನೀಡಲಾಗುವುದು ಎಂದು ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸುನಿಲ್ ಸಿಂಘಿ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವರ್ತಕರ ಸಮಾವೇಶದಲ್ಲಿ ಮಾತನಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ‘ಬೆಂಗಳೂರಿನ ನಂತರ ಜಿಲ್ಲೆ ವೇಗವಾಗಿ ಬೆಳೆಯುತ್ತಿದೆ. ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ವರ್ತಕರ ಎಲ್ಲ ಬೇಡಿಕೆಗಳ ಕುರಿತು ಸಂಬಂಧಪಟ್ಟವರ ಜತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಮಂಡಳಿಯ ಸದಸ್ಯ ಪ್ರಕಾಶ್ ಫಿರ್ಗಲ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿ.ಪಂ ಸಿಇಒ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಟಿ.ಜೆ.ಗಿರೀಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವ್ಯಾಪಾರಸ್ಥ ಕಾರ್ಮಿಕರಿಗೆ ₹5 ಲಕ್ಷದವರೆಗೆ ಆರೋಗ್ಯ ವಿಮೆ, 60 ವರ್ಷ ದಾಟಿದ ವ್ಯಾಪಾರಸ್ಥರಿಗೆ ₹3 ಸಾವಿರ ಪಿಂಚಣಿ ನೀಡಲಾಗುವುದು ಎಂದು ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸುನಿಲ್ ಸಿಂಘಿ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ರಾಷ್ಟ್ರೀಯ ವರ್ತಕರ ಕಲ್ಯಾಣ ಮಂಡಳಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವರ್ತಕರ ಸಮಾವೇಶದಲ್ಲಿ ಮಾತನಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ‘ಬೆಂಗಳೂರಿನ ನಂತರ ಜಿಲ್ಲೆ ವೇಗವಾಗಿ ಬೆಳೆಯುತ್ತಿದೆ. ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ವರ್ತಕರ ಎಲ್ಲ ಬೇಡಿಕೆಗಳ ಕುರಿತು ಸಂಬಂಧಪಟ್ಟವರ ಜತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಮಂಡಳಿಯ ಸದಸ್ಯ ಪ್ರಕಾಶ್ ಫಿರ್ಗಲ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿ.ಪಂ ಸಿಇಒ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಟಿ.ಜೆ.ಗಿರೀಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>