<p><strong>ತುಮಕೂರು</strong>: ‘ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಗುರುತಿಸುವಿಕೆ ಮತ್ತು ವರ್ಗಾವಣೆ ಸ್ಥಳ ಆಯ್ಕೆಯಲ್ಲಿ ಶಿಕ್ಷಕರು, ಬಿಆರ್ಪಿ, ಸಿಆರ್ಪಿಗಳಿಗೆ ಆಯಾ ತಾಲ್ಲೂಕಿನಲ್ಲಿಯೇ ಅವಕಾಶ ಕಲ್ಪಿಸಬೇಕು’ ಎಂದು ಶಿಕ್ಷಕರು ಮನವಿ ಮಾಡಿದರು.</p>.<p>ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿವಿಧ ಹಕ್ಕೊತ್ತಾಯ ಮಂಡಿಸಲಾಯಿತು.</p>.<p>‘ಶಿಕ್ಷಕರಿಗೆ ಬೋಧನಾ ಸಮಯದಲ್ಲಿ ಬೋಧನೇತರ ಚಟುವಟಿಕೆಗಳಿಂದ ಒತ್ತಡ ಹೆಚ್ಚುತ್ತಿದೆ. ಮೊಟ್ಟೆಯ ದರದಲ್ಲಿ ಆಗುವ ವ್ಯತ್ಯಾಸ, ಅಕ್ಷರ ದಾಸೋಹ, ಪ್ರತಿ ದಿನ ಆನ್ಲೈನ್ನಲ್ಲಿ ಮಾಹಿತಿ ಸಲ್ಲಿಸುವುದು ಹೊರೆಯಾಗುತ್ತಿದೆ. ನಿರ್ವಹಣೆ ಕಷ್ಟವಾಗುತ್ತಿದೆ’ ಎಂದು ಶಿಕ್ಷಕರು ಸಭೆಯ ಗಮನಕ್ಕೆ ತಂದರು.</p>.<p>ಕೆಲ ತಾಲ್ಲೂಕುಗಳಲ್ಲಿ ವೈದ್ಯಕೀಯ ವೆಚ್ಚ ಮರು ಪಾವತಿ ಬಾಕಿ ಇದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಹಿರಿತನದಲ್ಲಿ ನೀಡುತ್ತಿರುವ ಬಡ್ತಿಯಲ್ಲಿ ವಿಳಂಬವಾಗುತ್ತಿದೆ. ಶಿಕ್ಷಕರನ್ನು ಶೈಕ್ಷಣಿಕ ಚಟುವಟಿಕೆ, ತರಗತಿಗಳಲ್ಲಿ ಮಕ್ಕಳ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪರಶಿವಮೂರ್ತಿ, ‘ಸಭೆಯಲ್ಲಿ ಚರ್ಚೆಯಾದ ಎಲ್ಲ ವಿಚಾರಗಳನ್ನು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಸಂಘದ ರಾಜ್ಯ ಘಟಕದ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಲಾಗುವುದು’ ಎಂದರು.</p>.<p>ವಿವಿಧ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಭೆಗೆ ತಿಳಿಸಿದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಜಯರಾಂ, ಉಪಾಧ್ಯಕ್ಷ ಕೆ.ಜಿ.ಕಾಳೇಗೌಡ, ಪದಾಧಿಕಾರಿಗಳಾದ ಷಣ್ಮುಖಪ್ಪ, ಎನ್.ದಿನೇಶ್, ಆರ್.ಮಂಜಣ್ಣ, ಡಿ.ಜಯಲಕ್ಷ್ಮಮ್ಮ, ಎನ್.ಟಿ.ಪ್ರಕಾಶ್, ಪಿ.ಜಿ.ತಿಮ್ಮೇಗೌಡ, ಬೋರೇಗೌಡ, ವೆಂಕಟರಮಣ, ಟಿ.ಕೆ.ಪಟ್ಟಾಭಿರಾಮು, ಗಿರೀಶ್, ನಂದಿನಿ, ಮಹದೇವಯ್ಯ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಗುರುತಿಸುವಿಕೆ ಮತ್ತು ವರ್ಗಾವಣೆ ಸ್ಥಳ ಆಯ್ಕೆಯಲ್ಲಿ ಶಿಕ್ಷಕರು, ಬಿಆರ್ಪಿ, ಸಿಆರ್ಪಿಗಳಿಗೆ ಆಯಾ ತಾಲ್ಲೂಕಿನಲ್ಲಿಯೇ ಅವಕಾಶ ಕಲ್ಪಿಸಬೇಕು’ ಎಂದು ಶಿಕ್ಷಕರು ಮನವಿ ಮಾಡಿದರು.</p>.<p>ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿವಿಧ ಹಕ್ಕೊತ್ತಾಯ ಮಂಡಿಸಲಾಯಿತು.</p>.<p>‘ಶಿಕ್ಷಕರಿಗೆ ಬೋಧನಾ ಸಮಯದಲ್ಲಿ ಬೋಧನೇತರ ಚಟುವಟಿಕೆಗಳಿಂದ ಒತ್ತಡ ಹೆಚ್ಚುತ್ತಿದೆ. ಮೊಟ್ಟೆಯ ದರದಲ್ಲಿ ಆಗುವ ವ್ಯತ್ಯಾಸ, ಅಕ್ಷರ ದಾಸೋಹ, ಪ್ರತಿ ದಿನ ಆನ್ಲೈನ್ನಲ್ಲಿ ಮಾಹಿತಿ ಸಲ್ಲಿಸುವುದು ಹೊರೆಯಾಗುತ್ತಿದೆ. ನಿರ್ವಹಣೆ ಕಷ್ಟವಾಗುತ್ತಿದೆ’ ಎಂದು ಶಿಕ್ಷಕರು ಸಭೆಯ ಗಮನಕ್ಕೆ ತಂದರು.</p>.<p>ಕೆಲ ತಾಲ್ಲೂಕುಗಳಲ್ಲಿ ವೈದ್ಯಕೀಯ ವೆಚ್ಚ ಮರು ಪಾವತಿ ಬಾಕಿ ಇದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಹಿರಿತನದಲ್ಲಿ ನೀಡುತ್ತಿರುವ ಬಡ್ತಿಯಲ್ಲಿ ವಿಳಂಬವಾಗುತ್ತಿದೆ. ಶಿಕ್ಷಕರನ್ನು ಶೈಕ್ಷಣಿಕ ಚಟುವಟಿಕೆ, ತರಗತಿಗಳಲ್ಲಿ ಮಕ್ಕಳ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪರಶಿವಮೂರ್ತಿ, ‘ಸಭೆಯಲ್ಲಿ ಚರ್ಚೆಯಾದ ಎಲ್ಲ ವಿಚಾರಗಳನ್ನು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಸಂಘದ ರಾಜ್ಯ ಘಟಕದ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಲಾಗುವುದು’ ಎಂದರು.</p>.<p>ವಿವಿಧ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಭೆಗೆ ತಿಳಿಸಿದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಜಯರಾಂ, ಉಪಾಧ್ಯಕ್ಷ ಕೆ.ಜಿ.ಕಾಳೇಗೌಡ, ಪದಾಧಿಕಾರಿಗಳಾದ ಷಣ್ಮುಖಪ್ಪ, ಎನ್.ದಿನೇಶ್, ಆರ್.ಮಂಜಣ್ಣ, ಡಿ.ಜಯಲಕ್ಷ್ಮಮ್ಮ, ಎನ್.ಟಿ.ಪ್ರಕಾಶ್, ಪಿ.ಜಿ.ತಿಮ್ಮೇಗೌಡ, ಬೋರೇಗೌಡ, ವೆಂಕಟರಮಣ, ಟಿ.ಕೆ.ಪಟ್ಟಾಭಿರಾಮು, ಗಿರೀಶ್, ನಂದಿನಿ, ಮಹದೇವಯ್ಯ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>