ಸಚಿವ ಭೇಟಿ: ಸಚಿವ ಜಿ. ಪರಮೇಶ್ವರ ಚುನಾವಣಾ ಪ್ರಚಾರ ಸಭೆ ಮುಗಿಸಿ ತುಮಕೂರಿಗೆ ತೆರಳುತ್ತಿದ್ದಾಗ ಲೋಕಮ್ಮನಹಳ್ಳಿ ಗೇಟ್ ಸಮೀಪ ರಸ್ತೆ ಬದಿ ಜನರು ನಿಂತಿರುವುದನ್ನು ಗಮನಿಸಿದ್ದಾರೆ. ಅಪಘಾತ ನಡೆದಿರುವುದು ತಿಳಿದು ತುರುವೇಕೆರೆ ಪೊಲೀಸ್ ಇನ್ಸ್ಪೆಕ್ಟರ್ ಲೋಹಿತ್ ಅವರನ್ನು ಸ್ಥಳಕ್ಕೆ ಕರೆಸಿ, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದರು.