<p><strong>ಪಾವಗಡ: </strong>ಪಟ್ಟಣದ ಎಸ್.ಎಸ್.ಕೆ ಕಾಲೇಜಿನ ಮುಂಭಾಗದ ಗುಡ್ಡದಲ್ಲಿ ಗಾಯಗೊಂಡು ನಿತ್ರಾಣವಾಗಿದ್ದ ಕರಡಿಗೆ ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡಿ ಸ್ಥಳಾಂತರಿಸಿದರು.</p>.<p>ಪಟ್ಟಣದ ಹೊರವಲಯದ ತುಮಕೂರು ರಸ್ತೆಯ ಪಕ್ಕದಲ್ಲಿ ಮಂಗಳವಾರ ಕರಡಿ ಕುಂಟುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದರು. ನಿತ್ರಾಣಗೊಂಡಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.</p>.<p>ವೈದ್ಯರೊಂದಿಗೆ ಸ್ಥಳಕ್ಕೆ ಬಂದ ಸಿಬ್ಬಂದಿ ಕರಡಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಚಿಕಿತ್ಸೆ ನೀಡಿದರು. ನಂತರ ಕರಡಿಯನ್ನು ಬೋನಿನೊಳಗೆ ಹಾಕಿ ಸ್ಥಳಾಂತರಿಸಲಾಯಿತು.</p>.<p>ಸುಮಾರು 7ರಿಂದ 8 ವರ್ಷ ವಯಸ್ಸಿನ ಕರಡಿ ಕಾಲಿಗೆ ಗಾಯವಾಗಿದೆ. ಅಗತ್ಯ ಚಿಕಿತ್ಸೆ ನೀಡಲಾಗಿದೆ. ಸಂಪೂರ್ಣ ತಪಾಸಣೆ ನಂತರ ಎಷ್ಟು ಪ್ರಮಾಣದಲ್ಲಿ ಗಾಯವಾಗಿದೆ ಎಂಬುದು ತಿಳಿಯುತ್ತದೆ ಎಂದು ಸಿಬ್ಬಂದಿ ತಿಳಿಸಿದರು.</p>.<p>ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಾಯಗೊಂಡಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದರು.</p>.<p>ವೈದ್ಯ ಮುರುಳಿ, ಸುರೇಶ್ ಚಿಕಿತ್ಸೆ ನೀಡಿದರು. ಎಸಿಎಫ್ ಶ್ರೀನಿವಾಸ್, ಸಹಾಯಕ ವಲಯ ಅರಣ್ಯಾಧಿಕಾರಿ ಬಸವರಾಜು, ಸಿಬ್ಬಂದಿ ಗಂಗರಾಜು, ಕೃಷ್ಣಪ್ಪ, ವೆಂಕಟೇಶ್, ಕೇಶವ, ಧನಂಜಯ, ಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ಪಟ್ಟಣದ ಎಸ್.ಎಸ್.ಕೆ ಕಾಲೇಜಿನ ಮುಂಭಾಗದ ಗುಡ್ಡದಲ್ಲಿ ಗಾಯಗೊಂಡು ನಿತ್ರಾಣವಾಗಿದ್ದ ಕರಡಿಗೆ ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡಿ ಸ್ಥಳಾಂತರಿಸಿದರು.</p>.<p>ಪಟ್ಟಣದ ಹೊರವಲಯದ ತುಮಕೂರು ರಸ್ತೆಯ ಪಕ್ಕದಲ್ಲಿ ಮಂಗಳವಾರ ಕರಡಿ ಕುಂಟುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದರು. ನಿತ್ರಾಣಗೊಂಡಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.</p>.<p>ವೈದ್ಯರೊಂದಿಗೆ ಸ್ಥಳಕ್ಕೆ ಬಂದ ಸಿಬ್ಬಂದಿ ಕರಡಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಚಿಕಿತ್ಸೆ ನೀಡಿದರು. ನಂತರ ಕರಡಿಯನ್ನು ಬೋನಿನೊಳಗೆ ಹಾಕಿ ಸ್ಥಳಾಂತರಿಸಲಾಯಿತು.</p>.<p>ಸುಮಾರು 7ರಿಂದ 8 ವರ್ಷ ವಯಸ್ಸಿನ ಕರಡಿ ಕಾಲಿಗೆ ಗಾಯವಾಗಿದೆ. ಅಗತ್ಯ ಚಿಕಿತ್ಸೆ ನೀಡಲಾಗಿದೆ. ಸಂಪೂರ್ಣ ತಪಾಸಣೆ ನಂತರ ಎಷ್ಟು ಪ್ರಮಾಣದಲ್ಲಿ ಗಾಯವಾಗಿದೆ ಎಂಬುದು ತಿಳಿಯುತ್ತದೆ ಎಂದು ಸಿಬ್ಬಂದಿ ತಿಳಿಸಿದರು.</p>.<p>ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಾಯಗೊಂಡಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದರು.</p>.<p>ವೈದ್ಯ ಮುರುಳಿ, ಸುರೇಶ್ ಚಿಕಿತ್ಸೆ ನೀಡಿದರು. ಎಸಿಎಫ್ ಶ್ರೀನಿವಾಸ್, ಸಹಾಯಕ ವಲಯ ಅರಣ್ಯಾಧಿಕಾರಿ ಬಸವರಾಜು, ಸಿಬ್ಬಂದಿ ಗಂಗರಾಜು, ಕೃಷ್ಣಪ್ಪ, ವೆಂಕಟೇಶ್, ಕೇಶವ, ಧನಂಜಯ, ಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>