<p><strong>ಶಿರಾ:</strong> ನಗರದಲ್ಲಿ ಗುರುವಾರ ಗಾಳಿ ಮತ್ತು ಮಳೆಗೆ ಮರ ರಸ್ತೆಗೆ ಉರುಳಿ ಬಿದ್ದ ಕಾರಣ ಸಂಚಾರಕ್ಕೆ ಅಡಚಣೆಯಾಯಿತು</p>.<p>ಹಳೆ ರಾಷ್ಟ್ರೀಯ ಹೆದ್ದಾರಿ-4ರ ಎಪಿಎಂಸಿ ಸಮೀಪ ಮರ ಉರುಳಿ ಬಿದ್ದರೆ, ನಗರಸಭೆ ಕಡೆಯಿಂದ ಬರುವ ರಸ್ತೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ಬಿರುಗಾಳಿಗೆ ಮರದ ರಂಬೆಗಳು ರಸ್ತೆಗೆ ಮುರಿದು ಬಿದ್ದಿವೆ.</p>.<p>ಎಪಿಎಂಸಿ ಸಮೀಪ ಶಿರಾ ಕಡೆ ಬರುತ್ತಿದ್ದ ಟೆಂಪೊ ಮೇಲೆ ಮರ ಉರುಳಿ ಬಿದ್ದಿವೆ ಜೊತೆಗೆ ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿದೆ.</p>.<p>ರಸ್ತೆಗೆ ಮರದ ರಂಬೆಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋದ ಕಾರಣ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದರಿಂದಾಗಿ ರಸ್ತೆಯ ಒಂದೇ ಬದಿಯಲ್ಲಿ ವಾಹನಗಳು ನಿಧಾನವಾಗಿ ಚಲಿಸುವಂತಾಯಿತು.</p>.<p>ರಸ್ತೆಯಲ್ಲಿ ಮರದ ರಂಬೆಗಳು ಬಿದ್ದ ಕಾರಣ ಮಳೆ ಮತ್ತು ಗಾಳಿ ನಿಂತ ನಂತರ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮರದ ರಂಬೆಗಳನ್ನು ತೆರವುಗೊಳಿಸಿದರು. ಟೆಂಪೊ ಮೇಲೆ ಬಿದ್ದಿದ್ದ ರಂಬೆಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ನಗರದಲ್ಲಿ ಗುರುವಾರ ಗಾಳಿ ಮತ್ತು ಮಳೆಗೆ ಮರ ರಸ್ತೆಗೆ ಉರುಳಿ ಬಿದ್ದ ಕಾರಣ ಸಂಚಾರಕ್ಕೆ ಅಡಚಣೆಯಾಯಿತು</p>.<p>ಹಳೆ ರಾಷ್ಟ್ರೀಯ ಹೆದ್ದಾರಿ-4ರ ಎಪಿಎಂಸಿ ಸಮೀಪ ಮರ ಉರುಳಿ ಬಿದ್ದರೆ, ನಗರಸಭೆ ಕಡೆಯಿಂದ ಬರುವ ರಸ್ತೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ಬಿರುಗಾಳಿಗೆ ಮರದ ರಂಬೆಗಳು ರಸ್ತೆಗೆ ಮುರಿದು ಬಿದ್ದಿವೆ.</p>.<p>ಎಪಿಎಂಸಿ ಸಮೀಪ ಶಿರಾ ಕಡೆ ಬರುತ್ತಿದ್ದ ಟೆಂಪೊ ಮೇಲೆ ಮರ ಉರುಳಿ ಬಿದ್ದಿವೆ ಜೊತೆಗೆ ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿದೆ.</p>.<p>ರಸ್ತೆಗೆ ಮರದ ರಂಬೆಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋದ ಕಾರಣ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದರಿಂದಾಗಿ ರಸ್ತೆಯ ಒಂದೇ ಬದಿಯಲ್ಲಿ ವಾಹನಗಳು ನಿಧಾನವಾಗಿ ಚಲಿಸುವಂತಾಯಿತು.</p>.<p>ರಸ್ತೆಯಲ್ಲಿ ಮರದ ರಂಬೆಗಳು ಬಿದ್ದ ಕಾರಣ ಮಳೆ ಮತ್ತು ಗಾಳಿ ನಿಂತ ನಂತರ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮರದ ರಂಬೆಗಳನ್ನು ತೆರವುಗೊಳಿಸಿದರು. ಟೆಂಪೊ ಮೇಲೆ ಬಿದ್ದಿದ್ದ ರಂಬೆಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>