ತುಮಕೂರು: ಗುಬ್ಬಿ ತಾಲ್ಲೂಕಿನ ನಿಟ್ಟೂರು-ಮೈಸೂರು ರಸ್ತೆಯ ಬೆಲವತ್ತ ಗ್ರಾಮದ ಬಳಿ ಮಂಗಳವಾರ ರಾತ್ರಿ ರಸ್ತೆಗೆ ಅಡ್ಡವಾಗಿ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಲೋಕೋಪಯೋಗಿ ಇಲಾಖೆಯವರು ರಸ್ತೆ ಪಕ್ಕದಲ್ಲಿ ಆಳವಾದ ಗುಂಡಿ ತೆಗೆದಿರುವುದರಿಂದ ಮರಗಳು ಬಿದ್ದಿದೆ ಎಂದು ಆರೋಪಿಸಿ ಗ್ರಾಮಸ್ಥರು ಬುಧವಾರ ಬೆಳಿಗ್ಗೆ ಪ್ರತಿಭಟನೆ ಮಾಡಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಆಗಿರುವ ತಪ್ಪನ್ನು ಸರಿಪಡಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.