ಗುಬ್ಬಿ ವಲಯ ಅರಣ್ಯಾಧಿಕಾರಿಗಳಾದ ರವಿ ಮಾತನಾಡಿ, ‘ನಮ್ಮ ಇಲಾಖೆ ಗಮನಕ್ಕೆ ತರದೇ ಮರ ಕಡಿದಿರುವುದು ಸರಿಯಿಲ್ಲ. ಮರ ಕಡಿದ ಉದ್ದೇಶ ಏನೇ ಇದ್ದರೂ, ಕಡಿಯಲು ಅನುಸರಿಸಿದ ಕ್ರಮವನ್ನು ಒಪ್ಪಲಾಗುವುದಿಲ್ಲ. ಸ್ಥಳ ಪರಿಶೀಲಿಸಿ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಮರಕ್ಕೆ ವಿಷ ಹಾಕಿರುವುದನ್ನು ಖಾತರಿಪಡಿಸಿಕೊಳ್ಳಲು ಕಡಿದಿರುವ ಮರದ ಬುಡದ ಮಾದರಿ ಪಡೆದು ಅದನ್ನು ಪರೀಕ್ಷೆಗೆ ಕಳುಹಿಸಲು ಸಿದ್ಧತೆ ನಡೆಸಿದ್ದೇವೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು. ಅವರ ಪ್ರತಿಕ್ರಿಯೆ ಆಧರಿಸಿ ಶಿಕ್ಷೆ ನೀಡಲಾಗುವುದು’ ಎಂದು ಹೇಳಿದರು.