ತೆಂಗು ಬೆಳೆಗಾರರ ಪರಿಸ್ಥಿತಿ ಚಿಂತಾಜನಕವಾಗಿದೆ. ಸೂಕ್ತ ಭದ್ರತೆ ಇಲ್ಲದೆ ಆತಂಕದಲ್ಲಿದ್ದು, ಆತ್ಮಹತ್ಯೆಯತ್ತ ದೃಷ್ಟಿ ನೆಡುತ್ತಿದ್ದಾರೆ. ಸರ್ಕಾರ, ಜನಪ್ರತಿನಿಧಿಗಳು ರೈತರ ಪರ ಧ್ವನಿ ಎತ್ತಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಆಮದು ಸುಂಕು ಕಡಿಮೆ ಮಾಡಿ ವಿದೇಶಗಳಿಂದ ಎಣ್ಣೆ ಉತ್ಪನ್ನಗಳನ್ನು ತರಿಸಿ ಕೊಳ್ಳುತ್ತಿದ್ದಾರೆ. ಇದರಿಂದ ಕೊಬ್ಬರಿಗೆ ಸೂಕ್ತ ಬೆಲೆ ಸಿಗದಂತಾಗಿದೆ ಎಂದರು.