<p><strong>ಗುಬ್ಬಿ:</strong> ಕ್ಷಯದಿಂದ ದೇಶದಾದ್ಯಂತ ದಿನಕ್ಕೆ 576 ಜನರು ಮೃತಪಡುತ್ತಿದ್ದಾರೆ ಎಂದು ಗುಬ್ಬಿ ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ್ ಹೇಳಿದರು.</p>.<p>ಗುಬ್ಬಿ ಬಸ್ ನಿಲ್ದಾಣದಲ್ಲಿ ಬುಧವಾರ ಅರೋಗ್ಯ ಇಲಾಖೆ ಏರ್ಪಡಿಸಿದ್ದ ವಿಶ್ವ ಕ್ಷಯ ರೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>2020ನೇ ಸಾಲಿನಲ್ಲಿ 2,433 ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಡಾಟ್ಸ್ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ರೋಗದ ಬಗ್ಗೆ ಉದಾಸೀನ ತರವಲ್ಲ. ಎಲ್ಲರೂ ಈ ರೋಗದ ಬಗ್ಗೆ ಅರಿವು ಮೂಡಿಸಿಕೊಂಡು ನಿರ್ಮೂಲನೆ ಮಾಡುವುದು ಕರ್ತವ್ಯ<br />ಎಂದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ. ಬಿಂದುಮಾಧವ್ ಮಾತನಾಡಿ, ಕ್ಷಯ ರೋಗದ ಸಾವು ನೋವುಗಳ ಪ್ರಮಾಣ ಕಡಿಮೆ ಮಾಡುವ ತುರ್ತು ಜವಾಬ್ದಾರಿ ಆರೋಗ್ಯ ಇಲಾಖೆ ಜೊತೆ ಎಲ್ಲರ ಮೇಲಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈ ವರ್ಷ ‘ಕಾಲಘಟಿಸುತ್ತಿದೆ’ ಎಂಬ ಘೋಷಣೆಯೊಂದಿಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಬಗ್ಗೆ ಎಚ್ಚರಿಸಿದೆ. ತಾಲ್ಲೂಕಿನಲ್ಲಿ ಹಾಲಿ 138 ರೋಗಿಗಳು<br />ಚಿಕಿತ್ಸೆಯ ಮೇಲಿದ್ದಾರೆ. ತಾಲ್ಲೂಕಿನಲ್ಲಿ ಸಕ್ರಿಯ ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಂಡಿದ್ದು ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ಮಾಡುವ ಮೂಲಕ ಅರಿವು ಮೂಡಿಸುತ್ತಿದ್ದಾರೆ. ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಮೂಲಕ ಈ ರೋಗ ಗುಣಪಡಿಸಬಹುದಾಗಿದೆ ಎಂದರು.</p>.<p>ಆಶಾ ಕಾರ್ಯಕರ್ತೆಯರು, ಅಸ್ಪತ್ರೆ ಸಿಬ್ಬಂದಿ, ಗುಬ್ಬಿಯ ಸಾರ್ವಜನಿಕ ಆಸ್ಪತ್ರೆಯಿಂದ ಜಾಥಾ ಹೊರಟು ಘೋಷಣೆ ಕೂಗುತ್ತ ಬಸ್ ನಿಲ್ದಾಣ ತಲುಪಿ ಅಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<p>ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಕೇಶವರಾಜ್, ಡಾ.ಸುದರ್ಶನ್, ಆರೋಗ್ಯ ಇಲಾಖೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಕ್ಷಯದಿಂದ ದೇಶದಾದ್ಯಂತ ದಿನಕ್ಕೆ 576 ಜನರು ಮೃತಪಡುತ್ತಿದ್ದಾರೆ ಎಂದು ಗುಬ್ಬಿ ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ್ ಹೇಳಿದರು.</p>.<p>ಗುಬ್ಬಿ ಬಸ್ ನಿಲ್ದಾಣದಲ್ಲಿ ಬುಧವಾರ ಅರೋಗ್ಯ ಇಲಾಖೆ ಏರ್ಪಡಿಸಿದ್ದ ವಿಶ್ವ ಕ್ಷಯ ರೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>2020ನೇ ಸಾಲಿನಲ್ಲಿ 2,433 ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಡಾಟ್ಸ್ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ರೋಗದ ಬಗ್ಗೆ ಉದಾಸೀನ ತರವಲ್ಲ. ಎಲ್ಲರೂ ಈ ರೋಗದ ಬಗ್ಗೆ ಅರಿವು ಮೂಡಿಸಿಕೊಂಡು ನಿರ್ಮೂಲನೆ ಮಾಡುವುದು ಕರ್ತವ್ಯ<br />ಎಂದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ. ಬಿಂದುಮಾಧವ್ ಮಾತನಾಡಿ, ಕ್ಷಯ ರೋಗದ ಸಾವು ನೋವುಗಳ ಪ್ರಮಾಣ ಕಡಿಮೆ ಮಾಡುವ ತುರ್ತು ಜವಾಬ್ದಾರಿ ಆರೋಗ್ಯ ಇಲಾಖೆ ಜೊತೆ ಎಲ್ಲರ ಮೇಲಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈ ವರ್ಷ ‘ಕಾಲಘಟಿಸುತ್ತಿದೆ’ ಎಂಬ ಘೋಷಣೆಯೊಂದಿಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಬಗ್ಗೆ ಎಚ್ಚರಿಸಿದೆ. ತಾಲ್ಲೂಕಿನಲ್ಲಿ ಹಾಲಿ 138 ರೋಗಿಗಳು<br />ಚಿಕಿತ್ಸೆಯ ಮೇಲಿದ್ದಾರೆ. ತಾಲ್ಲೂಕಿನಲ್ಲಿ ಸಕ್ರಿಯ ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಂಡಿದ್ದು ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ಮಾಡುವ ಮೂಲಕ ಅರಿವು ಮೂಡಿಸುತ್ತಿದ್ದಾರೆ. ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಮೂಲಕ ಈ ರೋಗ ಗುಣಪಡಿಸಬಹುದಾಗಿದೆ ಎಂದರು.</p>.<p>ಆಶಾ ಕಾರ್ಯಕರ್ತೆಯರು, ಅಸ್ಪತ್ರೆ ಸಿಬ್ಬಂದಿ, ಗುಬ್ಬಿಯ ಸಾರ್ವಜನಿಕ ಆಸ್ಪತ್ರೆಯಿಂದ ಜಾಥಾ ಹೊರಟು ಘೋಷಣೆ ಕೂಗುತ್ತ ಬಸ್ ನಿಲ್ದಾಣ ತಲುಪಿ ಅಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<p>ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಕೇಶವರಾಜ್, ಡಾ.ಸುದರ್ಶನ್, ಆರೋಗ್ಯ ಇಲಾಖೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>