<p><strong>ಪಟ್ಟನಾಯಕನಹಳ್ಳಿ:</strong> ಶಿರಾ ತಾಲ್ಲೂಕಿನ ನಾದೂರು ಪ್ರಾಥಮಿಕ ಸಹಕಾರ ಸಂಘದ ಆಡಳಿತ ಮಂಡಳಿ ಆಯ್ಕೆ ಸಂಬಂಧ ಜೂನ್ 30ರಂದು ನಿಗದಿಯಾಗಿದ್ದ ಚುನಾವಣೆಯನ್ನು ಹಣದ ಅಭಾವದಿಂದ ಮುಂದೂಡಲಾಗಿದೆ. </p>.<p>ಚುನಾವಣೆ ನಡೆಸಲು ₹30 ಸಾವಿರ ಮುಂಗಡ ಪಾವತಿಸುವಂತೆ ಚುನಾವಣಾಧಿಕಾರಿ ಇಂದಿರಮ್ಮ ಅವರು ಸಂಘದ ಮುಖ್ಯ ಪ್ರವರ್ತಕರಿಗೆ ನೋಟಿಸ್ ನೀಡಿದ್ದರು. ಸಂಘದಲ್ಲಿ ಹಣಕಾಸು ಕೊರತೆಯಿದೆ ಎಂದು ಮುಖ್ಯ ಪ್ರವರ್ತಕರು ನೊಟೀಸ್ಗೆ ಉತ್ತರಿಸಿದ್ದರು. ಹೀಗಾಗಿ ಚುನಾವಣೆ ಮುಂದೂಡಿ ಚುನಾವಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.</p>.<p>ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ 41 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಯಾರೂ ನಾಮಪತ್ರ ಹಿಂಪಡೆದಿಲ್ಲ. ಚುನಾವಣೆ ಪ್ರಕ್ರಿಯೆ ನಡೆಸಲು ಹಣದ ಅಭಾವದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘದ ನೋಟಿಸ್ ಬೋರ್ಡ್ನಲ್ಲಿ ಅಂಟಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಸಹಕಾರ ಸಂಘಗಳು ವಿಭಜನೆಯಾಗಿ ಹೊಸದಾಗಿ ಅಸ್ತಿತ್ವಕ್ಕೆ ಬರುವ ಸಹಕಾರ ಸಂಘಗಳಿಗೆ ಸೂಕ್ತ ಹಣಕಾಸು ವ್ಯವಸ್ಥೆ ಆಗದ ಹೊರತು ಚುನಾವಣಾ ಪ್ರಕ್ರಿಯೆಗೆ ಅನುಮತಿ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಂಘದ ಷೇರುದಾರರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ಟನಾಯಕನಹಳ್ಳಿ:</strong> ಶಿರಾ ತಾಲ್ಲೂಕಿನ ನಾದೂರು ಪ್ರಾಥಮಿಕ ಸಹಕಾರ ಸಂಘದ ಆಡಳಿತ ಮಂಡಳಿ ಆಯ್ಕೆ ಸಂಬಂಧ ಜೂನ್ 30ರಂದು ನಿಗದಿಯಾಗಿದ್ದ ಚುನಾವಣೆಯನ್ನು ಹಣದ ಅಭಾವದಿಂದ ಮುಂದೂಡಲಾಗಿದೆ. </p>.<p>ಚುನಾವಣೆ ನಡೆಸಲು ₹30 ಸಾವಿರ ಮುಂಗಡ ಪಾವತಿಸುವಂತೆ ಚುನಾವಣಾಧಿಕಾರಿ ಇಂದಿರಮ್ಮ ಅವರು ಸಂಘದ ಮುಖ್ಯ ಪ್ರವರ್ತಕರಿಗೆ ನೋಟಿಸ್ ನೀಡಿದ್ದರು. ಸಂಘದಲ್ಲಿ ಹಣಕಾಸು ಕೊರತೆಯಿದೆ ಎಂದು ಮುಖ್ಯ ಪ್ರವರ್ತಕರು ನೊಟೀಸ್ಗೆ ಉತ್ತರಿಸಿದ್ದರು. ಹೀಗಾಗಿ ಚುನಾವಣೆ ಮುಂದೂಡಿ ಚುನಾವಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.</p>.<p>ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ 41 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಯಾರೂ ನಾಮಪತ್ರ ಹಿಂಪಡೆದಿಲ್ಲ. ಚುನಾವಣೆ ಪ್ರಕ್ರಿಯೆ ನಡೆಸಲು ಹಣದ ಅಭಾವದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘದ ನೋಟಿಸ್ ಬೋರ್ಡ್ನಲ್ಲಿ ಅಂಟಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಸಹಕಾರ ಸಂಘಗಳು ವಿಭಜನೆಯಾಗಿ ಹೊಸದಾಗಿ ಅಸ್ತಿತ್ವಕ್ಕೆ ಬರುವ ಸಹಕಾರ ಸಂಘಗಳಿಗೆ ಸೂಕ್ತ ಹಣಕಾಸು ವ್ಯವಸ್ಥೆ ಆಗದ ಹೊರತು ಚುನಾವಣಾ ಪ್ರಕ್ರಿಯೆಗೆ ಅನುಮತಿ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಂಘದ ಷೇರುದಾರರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>