ರೈತರ ಕೊಡುಗೆ ಗಣನೀಯ ವಿಶ್ವ ಮಟ್ಟದಲ್ಲಿ ಹಿರಿಮೆ ಪಡೆಯಲು ತಾಲ್ಲೂಕಿನ ರೈತರ ಕೊಡುಗೆ ಗಣನೀಯ. ಈ ನಿಟ್ಟಿನಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ಕ್ರೆಡಲ್ ಕೆಎಸ್ಪಿಡಿಸಿಎಲ್ ಸಂಸ್ಥೆ ಒತ್ತು ನೀಡಬೇಕು. ಶಾಲೆ ಕಾಲೇಜು ರಸ್ತೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕು.
ಸದಾಶಿವರೆಡ್ಡಿ ಅಧ್ಯಕ್ಷ ಶಕ್ತಿಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ ಪಾವಗಡ
ಸ್ಥಳೀಯರಿಗೆ ಉದ್ಯೋಗ ನೀಡಿ ಸೋಲಾರ್ ಘಟಕ ಸ್ಥಾಪಿಸಲು ಬಂದಿರುವ ದೇಶದ ಪ್ರಮುಖ ಕಂಪನಿಗಳು ಜಮೀನು ನೀಡಿದ ರೈತರ ಮಕ್ಕಳಿಗೆ ತಮ್ಮ ಕಂಪನಿಯಲ್ಲಿ ಉದ್ಯೋಗ ನೀಡಬೇಕು. ಸೋಲಾರ್ ಪಾರ್ಕ್ನಲ್ಲಿ ಸಾಕಷ್ಟು ಉದ್ಯೋಗ ಅವಕಾಶ ಇಲ್ಲದ ಕಾರಣ ಆ ಕಂಪನಿ ಕಾರ್ಯ ನಿರ್ವಹಿಸುತ್ತಿರುವ ಇತರೆ ಸ್ಥಳದಲ್ಲಿಯಾದರೂ ಆದ್ಯತೆ ಮೇರೆಗೆ ಕೆಲಸ ನೀಡಬೇಕು.
ಪರಮೇಶ್ವರನಾಯ್ಕ ಸಂಚಾಲಕ ಶಕ್ತಿಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ
ವೈದ್ಯಕೀಯ ಎಂಜಿನಿಯರ್ ಕಾಲೇಜು ಸ್ಥಾಪಿಸಿ ಸಾವಿರಾರು ಕೋಟಿ ಖರ್ಚು ಮಾಡಿ ಸೋಲಾರ್ ಪಾರ್ಕ್ ನಿರ್ಮಿಸಲಾಗಿದೆ. ರೈತರ ಮಕ್ಕಳಿಗಾಗಿ ವೈದ್ಯಕೀಯ ಎಂಜಿನಿಯರಿಂಗ್ ಕಾಲೇಜನ್ನು ತಾಲ್ಲೂಕಿನಲ್ಲಿ ಆರಂಭಿಸಬೇಕು. ಮಹಿಳೆಯರಿಗಾಗಿ ರ್ಯಾಪ್ಟೆ ವಳ್ಳೂರು ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗಾರ್ಮೆಂಟ್ಸ್ ಆರಂಭಿಸಬೇಕು.
ಆರ್.ಪಿ. ಸಾಂಬಸದಾಶಿವರೆಡ್ಡಿ ಪ್ರಧಾನ ಕಾರ್ಯದರ್ಶಿ ಶಕ್ತಿಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ
ಕೈಗಾರಿಕೆ ಆರಂಭಿಸಿ ಸೋಲಾರ್ ಪಾರ್ಕ್ ವಿಸ್ತರಣೆ ಮಾಡುತ್ತಿರುವುದು ಸಂತಸದಾಯಕ. ಇಲ್ಲಿ ಉತ್ಪಾದನೆಯಾಗುತ್ತಿರುವ ವಿದ್ಯುತ್ ಬಳಸಿಕೊಂಡು ಕೈಗಾರಿಕೆ ಸ್ಥಾಪಿಸಿದಲ್ಲಿ ತಾಲ್ಲೂಕಿನ ಜನರಿಗೆ ಅನುಕೂಲವಾಗಲಿದೆ. ಇದರಿಂದ ಸಾವಿರಾರು ಮಂದಿ ವಿವಿಧೆಡೆಗೆ ವಲಸೆ ಹೋಗುವುದನ್ನು ತಪ್ಪಿಸಬಹುದು. ಕೂಲಿ ಕಾರ್ಮಿಕರು ಕಾರ್ಮಿಕರ ಜೀವನಕ್ಕೆ ಅಗತ್ಯ ಉದ್ಯೋಗ ಸೃಷ್ಟಿಸಬೇಕು.