<p>ತುಮಕೂರು: ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ನಗರದ ಅಮಾನಿಕೆರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಬೋಟ್ ಪೆರೇಡ್ ನೋಡುಗರ ಗಮನ ಸೆಳೆಯಿತು.</p>.<p>ವಿದ್ಯುತ್ ದೀಪಗಳಿಂದ ಸಿಂಗಾರಗೊಂಡಿದ್ದ ದೋಣಿಗಳು ಕತ್ತಲೆಯಲ್ಲಿ ಕೆರೆಯಲ್ಲಿ ತೇಲುತ್ತಾ ಸಾಗುತ್ತಿದ್ದ ದೃಶ್ಯ ವೀಕ್ಷಕರ ಮನಸೂರೆಗೊಳಿಸಿತು. ಕೆರೆಯಲ್ಲಿನ ಸೇತುವೆಯನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೆರೆ ಬಳಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.</p>.<p>ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯಿತು. ಸಾರ್ವಜನಿಕರು ಉಚಿತವಾಗಿ ಅಮಾನಿಕೆರೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಿದ್ದರಿಂದ ಹೆಚ್ಚಿನ ಜನ ಸೇರಿದ್ದರು. ಸಂಜೆ 6 ಗಂಟೆಯಿಂದಲೇ ಅಮಾನಿಕೆರೆ ಕಡೆಗೆ ಹೆಜ್ಜೆ ಹಾಕಿದರು. ಪೆರೇಡ್ ನಂತರ ಧ್ವನಿ ಹಾಗೂ ಬೆಳಕು ಪ್ರದರ್ಶನ, ಸಂಗೀತ ಕಾರಂಜಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಪೆರೇಡ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-291591224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ನಗರದ ಅಮಾನಿಕೆರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಬೋಟ್ ಪೆರೇಡ್ ನೋಡುಗರ ಗಮನ ಸೆಳೆಯಿತು.</p>.<p>ವಿದ್ಯುತ್ ದೀಪಗಳಿಂದ ಸಿಂಗಾರಗೊಂಡಿದ್ದ ದೋಣಿಗಳು ಕತ್ತಲೆಯಲ್ಲಿ ಕೆರೆಯಲ್ಲಿ ತೇಲುತ್ತಾ ಸಾಗುತ್ತಿದ್ದ ದೃಶ್ಯ ವೀಕ್ಷಕರ ಮನಸೂರೆಗೊಳಿಸಿತು. ಕೆರೆಯಲ್ಲಿನ ಸೇತುವೆಯನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೆರೆ ಬಳಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.</p>.<p>ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯಿತು. ಸಾರ್ವಜನಿಕರು ಉಚಿತವಾಗಿ ಅಮಾನಿಕೆರೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಿದ್ದರಿಂದ ಹೆಚ್ಚಿನ ಜನ ಸೇರಿದ್ದರು. ಸಂಜೆ 6 ಗಂಟೆಯಿಂದಲೇ ಅಮಾನಿಕೆರೆ ಕಡೆಗೆ ಹೆಜ್ಜೆ ಹಾಕಿದರು. ಪೆರೇಡ್ ನಂತರ ಧ್ವನಿ ಹಾಗೂ ಬೆಳಕು ಪ್ರದರ್ಶನ, ಸಂಗೀತ ಕಾರಂಜಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಪೆರೇಡ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿದರು. ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-291591224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>