<p>ತುರುವೇಕೆರೆ: ತಾಲ್ಲೂಕು ಒಳ ಮೀಸಲಾತಿ ಹೋರಾಟ ಸಮಿತಿ, ಮಾದಾರ ಮಹಾಸಭಾ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ ನಡೆಯಿತು.</p>.<p>ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸರ್ಕಾರದ ನಿಲುವು ಖಂಡಿಸಿ ತಮಟೆ ಬಾರಿಸುವ ಮೂಲಕ ಸರ್ಕಾರ ಒಳಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಬಿಳಿಗೆರೆ ಮಾತನಾಡಿ, ಅಂಬೇಡ್ಕರ್ ಜಗತ್ತೇ ಪೂಜಿಸುವ ವ್ಯಕ್ತಿಯಾಗಿದ್ದಾರೆ. ಪ್ರಪಂಚವೇ ಅಂಬೇಡ್ಕರ್ ಅವರನ್ನು ಪೂಜಿಸುತ್ತಿದ್ದರೂ, ಅವರು ಜೀವಂತವಿದ್ದ ಕಾಲದಲ್ಲಿ ಅವರನ್ನು ಸ್ಪೃಶ್ಯ ಸಮಾಜ ದೇಶದ್ರೋಹಿಯಂತೆ ಕಾಣುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಅಂಬೇಡ್ಕರ್ ಮಹಾನ್ ಮಾನವತಾವಾದಿ. ಎಲ್ಲರನ್ನೂ ಸಮಾನವಾಗಿ ನೋಡಬೇಕೆಂದು ಪ್ರತಿಪಾದಿಸಿದವರು. ಸಮ ಸಮಾಜದ ನಿರ್ಮಾಣದ ಕನಸು ಹೊತ್ತಿದ್ದರು. ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿ ಎಂದು ಅಲವತ್ತುಕೊಂಡಿದ್ದವರು ಅಂಬೇಡ್ಕರ್. ಅವರು ಸಾವಿರ ವರ್ಷಗಳಿಗೆ ಆಗುವಷ್ಟು ಯೋಜನೆ ರೂಪಿಸಿದ್ದರು ಎಂದರು.</p>.<p>ಮಾಜಿ ಶಾಸಕ ಮಸಾಲಾ ಜಯರಾಂ ಮಾತನಾಡಿ, ರಾಜ್ಯ ಸರ್ಕಾರ ದಲಿತರ ನಡುವೆ ಹೊಡೆದಾಡುವ ನೀತಿ ಅನುಸರಿಸುತ್ತಿದೆ. ಅಂಬೇಡ್ಕರ್ ಅವರ ಕನಸಾಗಿದ್ದ ಸಮಾನತೆಯ ಮನೋಭಾವಕ್ಕೆ ಈ ಸರ್ಕಾರ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ. ಅವರು ಶಾಸಕರಾಗಿದ್ದ ವೇಳೆಯಲ್ಲೂ ಎಲ್ಲರನ್ನೂ ಒಂದೆಡೆ ಸೇರಿಸಿ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಿ ಎಂದು ಹೇಳಿದರೂ ದುರಾವರ್ತನೆಯಿಂದ ಈ ಸರ್ಕಾರ ವರ್ತಿಸುತ್ತಿದೆ ಎಂದು ದೂರಿದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಎಚ್.ಬಿ.ನಂಜೇಗೌಡ, ನರಸಿಂಹಮೂರ್ತಿ, ವಿ.ಟಿ.ವೆಂಕಟರಾಮಯ್ಯ, ದಂಡಿನಶಿವರ ಕುಮಾರ್, ಮಲ್ಲೂರು ತಿಮ್ಮೇಶ್, ಲಕ್ಷ್ಮೀಶ್. ಡಾ.ಮುರುಳೀಧರ್, ಡಾ.ಚಂದ್ರಯ್ಯ, ಗುರುದತ್, ಮಂಜಣ್ಣ, ಚಿದಾನಂದ್, ಸುಬ್ರಮಣಿ ಶ್ರೀಕಂಠೇಗೌಡ, ವಸಂತಕುಮಾರ್, ಹಾವಾಳ ಶಿವಕುಮಾರ್, ಶೌಕತ್, ಎಸ್. ಎಂ. ಕುಮಾರಸ್ವಾಮಿ, ಮುನಿಯೂರು ಮಂಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-820439781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ತಾಲ್ಲೂಕು ಒಳ ಮೀಸಲಾತಿ ಹೋರಾಟ ಸಮಿತಿ, ಮಾದಾರ ಮಹಾಸಭಾ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ ನಡೆಯಿತು.</p>.<p>ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸರ್ಕಾರದ ನಿಲುವು ಖಂಡಿಸಿ ತಮಟೆ ಬಾರಿಸುವ ಮೂಲಕ ಸರ್ಕಾರ ಒಳಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಬಿಳಿಗೆರೆ ಮಾತನಾಡಿ, ಅಂಬೇಡ್ಕರ್ ಜಗತ್ತೇ ಪೂಜಿಸುವ ವ್ಯಕ್ತಿಯಾಗಿದ್ದಾರೆ. ಪ್ರಪಂಚವೇ ಅಂಬೇಡ್ಕರ್ ಅವರನ್ನು ಪೂಜಿಸುತ್ತಿದ್ದರೂ, ಅವರು ಜೀವಂತವಿದ್ದ ಕಾಲದಲ್ಲಿ ಅವರನ್ನು ಸ್ಪೃಶ್ಯ ಸಮಾಜ ದೇಶದ್ರೋಹಿಯಂತೆ ಕಾಣುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಅಂಬೇಡ್ಕರ್ ಮಹಾನ್ ಮಾನವತಾವಾದಿ. ಎಲ್ಲರನ್ನೂ ಸಮಾನವಾಗಿ ನೋಡಬೇಕೆಂದು ಪ್ರತಿಪಾದಿಸಿದವರು. ಸಮ ಸಮಾಜದ ನಿರ್ಮಾಣದ ಕನಸು ಹೊತ್ತಿದ್ದರು. ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿ ಎಂದು ಅಲವತ್ತುಕೊಂಡಿದ್ದವರು ಅಂಬೇಡ್ಕರ್. ಅವರು ಸಾವಿರ ವರ್ಷಗಳಿಗೆ ಆಗುವಷ್ಟು ಯೋಜನೆ ರೂಪಿಸಿದ್ದರು ಎಂದರು.</p>.<p>ಮಾಜಿ ಶಾಸಕ ಮಸಾಲಾ ಜಯರಾಂ ಮಾತನಾಡಿ, ರಾಜ್ಯ ಸರ್ಕಾರ ದಲಿತರ ನಡುವೆ ಹೊಡೆದಾಡುವ ನೀತಿ ಅನುಸರಿಸುತ್ತಿದೆ. ಅಂಬೇಡ್ಕರ್ ಅವರ ಕನಸಾಗಿದ್ದ ಸಮಾನತೆಯ ಮನೋಭಾವಕ್ಕೆ ಈ ಸರ್ಕಾರ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ. ಅವರು ಶಾಸಕರಾಗಿದ್ದ ವೇಳೆಯಲ್ಲೂ ಎಲ್ಲರನ್ನೂ ಒಂದೆಡೆ ಸೇರಿಸಿ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಿ ಎಂದು ಹೇಳಿದರೂ ದುರಾವರ್ತನೆಯಿಂದ ಈ ಸರ್ಕಾರ ವರ್ತಿಸುತ್ತಿದೆ ಎಂದು ದೂರಿದರು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಎಚ್.ಬಿ.ನಂಜೇಗೌಡ, ನರಸಿಂಹಮೂರ್ತಿ, ವಿ.ಟಿ.ವೆಂಕಟರಾಮಯ್ಯ, ದಂಡಿನಶಿವರ ಕುಮಾರ್, ಮಲ್ಲೂರು ತಿಮ್ಮೇಶ್, ಲಕ್ಷ್ಮೀಶ್. ಡಾ.ಮುರುಳೀಧರ್, ಡಾ.ಚಂದ್ರಯ್ಯ, ಗುರುದತ್, ಮಂಜಣ್ಣ, ಚಿದಾನಂದ್, ಸುಬ್ರಮಣಿ ಶ್ರೀಕಂಠೇಗೌಡ, ವಸಂತಕುಮಾರ್, ಹಾವಾಳ ಶಿವಕುಮಾರ್, ಶೌಕತ್, ಎಸ್. ಎಂ. ಕುಮಾರಸ್ವಾಮಿ, ಮುನಿಯೂರು ಮಂಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-820439781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>