ಬೆಳಿಗ್ಗೆ 10.11ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಮಠಕ್ಕೆ ಭೇಟಿ ನೀಡಿದರು. ಅವರೊಟ್ಟಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇದ್ದರು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಸಂಸದ ಜಿ.ಎಸ್. ಬಸವರಾಜ್, ಶಾಸಕ ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್ ಗೌಡ ಸ್ಥಳದಲ್ಲಿದ್ದರು. ಮುಖ್ಯಮಂತ್ರಿ ಆಗಮನದ ಸುದ್ದಿ ತಿಳಿದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ವ್ಯಕ್ತಿಗತ ಅಂತರ ಮರೆತು ನೆರೆದಿದ್ದರು.