<p><strong>ತಿಪಟೂರು</strong>: ತಾಲ್ಲೂಕಿನ ಪರುವಗೊಂಡನಹಳ್ಳಿಯಲ್ಲಿ ಬಿದರೆಗುಡಿ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಿಂದ ದತ್ತು ಗ್ರಾಮದ ಯೋಜನೆಯಡಿ ವಿಶ್ವ ಜೇನು ನೊಣ ದಿನಾಚರಣೆ ಅಂಗವಾಗಿ ಸುಸ್ಥಿರ ಆದಾಯಕ್ಕಾಗಿ ಜೇನು ಕೃಷಿ ಕಾರ್ಯಾಗಾರ ನಡೆಯಿತು.</p>.<p>ಕೆವಿಕೆ ಮುಖ್ಯಸ್ಥ ಶಂಕರ ಎಂ.ಎಚ್. ಮಾತನಾಡಿ, ರೈತರು ಜೇನು ಸಾಕಣೆಯನ್ನು ಉಪಕಸುಬಾಗಿ ಅಳವಡಿಸಿಕೊಂಡಲ್ಲಿ ಕಡಿಮೆ ವೆಚ್ಚದಲ್ಲಿ ಉತ್ತಮ ಆದಾಯ ಗಳಿಸಬಹುದು. ಜೇನು ನೊಣಗಳು ಪರಾಗಸ್ಪರ್ಶ ಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಕೃಷಿ ಉತ್ಪಾದನೆ ಹೆಚ್ಚಿಸಲು ಸಹಕಾರಿ ಎಂದು ಹೇಳಿದರು.</p>.<p>ಕಾರ್ಯಾಗಾರದಲ್ಲಿ ಜೇನು ಸಾಕಣೆ ಮಹತ್ವ, ಜೇನು ನೊಣಗಳ ನಿರ್ವಹಣೆ, ಜೇನು ಉತ್ಪಾದನೆ, ಮೌಲ್ಯವರ್ದನೆ ಹಾಗೂ ಮಾರುಕಟ್ಟೆ ಅವಕಾಶಗಳ ಕುರಿತು ತಿಳಿಸಲಾಯಿತು. ವೈಜ್ಞಾನಿಕ ರೀತಿಯಲ್ಲಿ ಜೇನು ಸಾಕಣೆ ಕೈಗೊಳ್ಳುವ ಕುರಿತು ಪ್ರಾಯೋಗಿಕ ಸಲಹೆಗಳನ್ನು ಒದಗಿಸಲಾಯಿತು.</p>.<p>ಕೇಂದ್ರದ ವಿಜ್ಞಾನಿ ತಸ್ಮಿಯಾಕೌಸರ್ ಮಾತನಾಡಿ, ಜಿಲ್ಲೆಯಾದ್ಯಂತ ಮೇ 20ರಿಂದ 24ರ ವರೆಗೆ ತುಂತುರು ಮಳೆಯಾಗುವ ಸಂಭವವಿದ್ದು ರೈತರು ಬೆಳೆ ಮತ್ತು ಜಾನುವಾರುಗಳಿಗೆ ಸುರಕ್ಷಿತ ಕ್ರಮ ಅನುಸರಿಸಬೇಕಿದೆ. ಶಿಫಾರಸು ಮಾಡಿರುವ ಪ್ರಮಾಣದಷ್ಟು ಗೊಬ್ಬರವನ್ನು ಬಳಸಿ ಉತ್ತಮ ಬೆಳೆ ಪಡೆಯಿರಿ ಎಂದು ತಿಳಿಸಿದರು.</p>.<p>ಕೇಂದ್ರದ ತೋಟಗಾರಿಕ ವಿಜ್ಞಾನಿ ಕೀರ್ತಿಶಂಕರ್ ಕೆ ಮಾತನಾಡಿ, ತೆಂಗು, ಅಡಿಕೆ ಬೆಳೆಗಳಲ್ಲಿ ಬಾಳೆಯನ್ನು ಅಂತರ ಬೆಳೆಯಾಗಿ ಬೆಳೆಯುವುದರಿಂದ ಅಧಿಕ ಲಾಭ ಪಡೆಯಬಹುದು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಗಾನವಿ, ಮೌಲ್ಯ, ರೇಣುಕಮೂರ್ತಿ, ಶಂಕರಪ್ಪ, ಧನಂಜಯ್ ಸೇರಿದಂತೆ 50ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-1941837155</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ತಾಲ್ಲೂಕಿನ ಪರುವಗೊಂಡನಹಳ್ಳಿಯಲ್ಲಿ ಬಿದರೆಗುಡಿ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಿಂದ ದತ್ತು ಗ್ರಾಮದ ಯೋಜನೆಯಡಿ ವಿಶ್ವ ಜೇನು ನೊಣ ದಿನಾಚರಣೆ ಅಂಗವಾಗಿ ಸುಸ್ಥಿರ ಆದಾಯಕ್ಕಾಗಿ ಜೇನು ಕೃಷಿ ಕಾರ್ಯಾಗಾರ ನಡೆಯಿತು.</p>.<p>ಕೆವಿಕೆ ಮುಖ್ಯಸ್ಥ ಶಂಕರ ಎಂ.ಎಚ್. ಮಾತನಾಡಿ, ರೈತರು ಜೇನು ಸಾಕಣೆಯನ್ನು ಉಪಕಸುಬಾಗಿ ಅಳವಡಿಸಿಕೊಂಡಲ್ಲಿ ಕಡಿಮೆ ವೆಚ್ಚದಲ್ಲಿ ಉತ್ತಮ ಆದಾಯ ಗಳಿಸಬಹುದು. ಜೇನು ನೊಣಗಳು ಪರಾಗಸ್ಪರ್ಶ ಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಕೃಷಿ ಉತ್ಪಾದನೆ ಹೆಚ್ಚಿಸಲು ಸಹಕಾರಿ ಎಂದು ಹೇಳಿದರು.</p>.<p>ಕಾರ್ಯಾಗಾರದಲ್ಲಿ ಜೇನು ಸಾಕಣೆ ಮಹತ್ವ, ಜೇನು ನೊಣಗಳ ನಿರ್ವಹಣೆ, ಜೇನು ಉತ್ಪಾದನೆ, ಮೌಲ್ಯವರ್ದನೆ ಹಾಗೂ ಮಾರುಕಟ್ಟೆ ಅವಕಾಶಗಳ ಕುರಿತು ತಿಳಿಸಲಾಯಿತು. ವೈಜ್ಞಾನಿಕ ರೀತಿಯಲ್ಲಿ ಜೇನು ಸಾಕಣೆ ಕೈಗೊಳ್ಳುವ ಕುರಿತು ಪ್ರಾಯೋಗಿಕ ಸಲಹೆಗಳನ್ನು ಒದಗಿಸಲಾಯಿತು.</p>.<p>ಕೇಂದ್ರದ ವಿಜ್ಞಾನಿ ತಸ್ಮಿಯಾಕೌಸರ್ ಮಾತನಾಡಿ, ಜಿಲ್ಲೆಯಾದ್ಯಂತ ಮೇ 20ರಿಂದ 24ರ ವರೆಗೆ ತುಂತುರು ಮಳೆಯಾಗುವ ಸಂಭವವಿದ್ದು ರೈತರು ಬೆಳೆ ಮತ್ತು ಜಾನುವಾರುಗಳಿಗೆ ಸುರಕ್ಷಿತ ಕ್ರಮ ಅನುಸರಿಸಬೇಕಿದೆ. ಶಿಫಾರಸು ಮಾಡಿರುವ ಪ್ರಮಾಣದಷ್ಟು ಗೊಬ್ಬರವನ್ನು ಬಳಸಿ ಉತ್ತಮ ಬೆಳೆ ಪಡೆಯಿರಿ ಎಂದು ತಿಳಿಸಿದರು.</p>.<p>ಕೇಂದ್ರದ ತೋಟಗಾರಿಕ ವಿಜ್ಞಾನಿ ಕೀರ್ತಿಶಂಕರ್ ಕೆ ಮಾತನಾಡಿ, ತೆಂಗು, ಅಡಿಕೆ ಬೆಳೆಗಳಲ್ಲಿ ಬಾಳೆಯನ್ನು ಅಂತರ ಬೆಳೆಯಾಗಿ ಬೆಳೆಯುವುದರಿಂದ ಅಧಿಕ ಲಾಭ ಪಡೆಯಬಹುದು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಗಾನವಿ, ಮೌಲ್ಯ, ರೇಣುಕಮೂರ್ತಿ, ಶಂಕರಪ್ಪ, ಧನಂಜಯ್ ಸೇರಿದಂತೆ 50ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-1941837155</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>