<p><strong>ತುಮಕೂರು</strong>: ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೊ ವಿಸ್ತರಿಸುವ ಯೋಜನೆ ರೋಗಗ್ರಸ್ತ ಯೋಜನೆಯಾಗಿ ₹25 ಕೋಟಿ ವಸೂಲಾಗದ ಸಾಲದ ಪಟ್ಟಿಗೆ ಸೇರಬಹುದು. ಈ ಬಗ್ಗೆ ನಾಗರಿಕರು ಧ್ವನಿ ಎತ್ತಬೇಕು ಎಂದು ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಎನ್.ಎಸ್.ಪಂಡಿತ್ ಜವಾಹರ್ ಮನವಿ ಮಾಡಿದ್ದಾರೆ.</p>.<p>ಮೆಟ್ರೊ ವಿಸ್ತರಣೆಗೆ ಸರ್ಕಾರದಿಂದ ₹25 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. 40 ನಿಲ್ದಾಣಗಳು ನಿರ್ಮಾಣವಾಗಲಿವೆ. ನಗರದಿಂದ ಮೆಟ್ರೊ ಮೂಲಕ ಬೆಂಗಳೂರು ತಲುಪಲು ಕನಿಷ್ಠ 2 ಗಂಟೆ ಸಮಯ ಆಗುತ್ತದೆ. ಸುಮಾರು ₹250 ರಿಂದ ₹300 ದರ ನಿಗದಿ ಪಡಿಸಬಹುದು. ಶೇ 70 ರಷ್ಟು ಪ್ರಯಾಣಿಕರು ಆಸನಗಳು ಇಲ್ಲದೆ ನಿಂತುಕೊಂಡೆ ಹೋಗಬೇಕಾಗುತ್ತದೆ. ಶೌಚಾಲಯದ ವ್ಯವಸ್ಥೆಯೂ ಇರುವುದಿಲ್ಲ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಗುತ್ತದೆ ಎಂದಿದ್ದಾರೆ. ಮೆಟ್ರೊ ಬದಲಿಗೆ ರೈಲು ಪ್ರಯಾಣ ಉತ್ತಮ. ಕೇವಲ ₹20 ಕೊಟ್ಟು ಮೆಮು ರೈಲಿನಲ್ಲಿ ಒಂದೂವರೆ ಗಂಟೆಯಲ್ಲಿ ಬೆಂಗಳೂರಿಗೆ ಹೋಗಬಹುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-17-1979376886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೊ ವಿಸ್ತರಿಸುವ ಯೋಜನೆ ರೋಗಗ್ರಸ್ತ ಯೋಜನೆಯಾಗಿ ₹25 ಕೋಟಿ ವಸೂಲಾಗದ ಸಾಲದ ಪಟ್ಟಿಗೆ ಸೇರಬಹುದು. ಈ ಬಗ್ಗೆ ನಾಗರಿಕರು ಧ್ವನಿ ಎತ್ತಬೇಕು ಎಂದು ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಎನ್.ಎಸ್.ಪಂಡಿತ್ ಜವಾಹರ್ ಮನವಿ ಮಾಡಿದ್ದಾರೆ.</p>.<p>ಮೆಟ್ರೊ ವಿಸ್ತರಣೆಗೆ ಸರ್ಕಾರದಿಂದ ₹25 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. 40 ನಿಲ್ದಾಣಗಳು ನಿರ್ಮಾಣವಾಗಲಿವೆ. ನಗರದಿಂದ ಮೆಟ್ರೊ ಮೂಲಕ ಬೆಂಗಳೂರು ತಲುಪಲು ಕನಿಷ್ಠ 2 ಗಂಟೆ ಸಮಯ ಆಗುತ್ತದೆ. ಸುಮಾರು ₹250 ರಿಂದ ₹300 ದರ ನಿಗದಿ ಪಡಿಸಬಹುದು. ಶೇ 70 ರಷ್ಟು ಪ್ರಯಾಣಿಕರು ಆಸನಗಳು ಇಲ್ಲದೆ ನಿಂತುಕೊಂಡೆ ಹೋಗಬೇಕಾಗುತ್ತದೆ. ಶೌಚಾಲಯದ ವ್ಯವಸ್ಥೆಯೂ ಇರುವುದಿಲ್ಲ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಗುತ್ತದೆ ಎಂದಿದ್ದಾರೆ. ಮೆಟ್ರೊ ಬದಲಿಗೆ ರೈಲು ಪ್ರಯಾಣ ಉತ್ತಮ. ಕೇವಲ ₹20 ಕೊಟ್ಟು ಮೆಮು ರೈಲಿನಲ್ಲಿ ಒಂದೂವರೆ ಗಂಟೆಯಲ್ಲಿ ಬೆಂಗಳೂರಿಗೆ ಹೋಗಬಹುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-17-1979376886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>