<p><strong>ತುಮಕೂರು</strong>: ಪ್ರತಿ ಮನೆಯಲ್ಲಿ ದೇವರ ಕೋಣೆಯಂತೆ ಗ್ರಂಥಾಲಯವೂ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಕೆ.ಮಾನಸ ಹೇಳಿದರು.</p>.<p>ನಗರದಲ್ಲಿ ಶನಿವಾರ ನಡೆದ ‘ಮನೆಗೊಂದು ಗ್ರಂಥಾಲಯ’ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>ಗ್ರಂಥಾಲಯ ಕೇವಲ ಪುಸ್ತಕದ ಸರಕಲ್ಲ, ಅದು ನಮ್ಮ ಆತ್ಮದಂತೆ. ಪ್ರತಿ ವರ್ಷ 7 ಸಾವಿರ ಹೊಸ ಪುಸ್ತಕಗಳು ಮುದ್ರಣವಾಗುತ್ತಿವೆ. ಪುಸ್ತಕ ಓದುವ ಸಂಸ್ಕೃತಿ ಕ್ಷೀಣಿಸುತ್ತಿದೆ. ಪುಸ್ತಕ ಸಂಸ್ಕೃತಿ ಉಳಿಸುವ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರವು 2026ರಲ್ಲಿ 1 ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸಲು ಉದ್ದೇಶಿಸಿದೆ ಎಂದರು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ 10 ಜನ ಒಳಗೊಂಡ ಜಿಲ್ಲಾ ಜಾಗೃತಿ ಸಮಿತಿ ರಚಿಸಲಾಯಿತು. ಡಿ.ಎನ್.ಯೋಗೀಶ್ವರಪ್ಪ, ಎಂ.ಎಚ್.ನಾಗರಾಜು, ಎಂ.ವಿ.ಶಂಕರಾನಂದ, ಸಣ್ಣಹೊನ್ನಯ್ಯ ಕಂಟಲಗೆರೆ, ಟಿ.ಆರ್.ಲೀಲಾವತಿ, ರಾಣಿ ಚಂದ್ರಶೇಖರ್, ಚಿಕ್ಕಬೆಳ್ಳಾವಿ ಶಿವಕುಮಾರ್, ರೇಣುಕಾಪ್ರಸಾದ್, ಎಂ.ಗೋವಿಂದರಾಯ, ಕಮಲಾ ರಾಜೇಶ್ ಅವರನ್ನು ಸಮಿತಿಗೆ ನೇಮಿಸಲಾಯಿತು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಪ್ರತಿ ಮನೆಯಲ್ಲಿ ದೇವರ ಕೋಣೆಯಂತೆ ಗ್ರಂಥಾಲಯವೂ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಕೆ.ಮಾನಸ ಹೇಳಿದರು.</p>.<p>ನಗರದಲ್ಲಿ ಶನಿವಾರ ನಡೆದ ‘ಮನೆಗೊಂದು ಗ್ರಂಥಾಲಯ’ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>ಗ್ರಂಥಾಲಯ ಕೇವಲ ಪುಸ್ತಕದ ಸರಕಲ್ಲ, ಅದು ನಮ್ಮ ಆತ್ಮದಂತೆ. ಪ್ರತಿ ವರ್ಷ 7 ಸಾವಿರ ಹೊಸ ಪುಸ್ತಕಗಳು ಮುದ್ರಣವಾಗುತ್ತಿವೆ. ಪುಸ್ತಕ ಓದುವ ಸಂಸ್ಕೃತಿ ಕ್ಷೀಣಿಸುತ್ತಿದೆ. ಪುಸ್ತಕ ಸಂಸ್ಕೃತಿ ಉಳಿಸುವ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರವು 2026ರಲ್ಲಿ 1 ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸಲು ಉದ್ದೇಶಿಸಿದೆ ಎಂದರು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ 10 ಜನ ಒಳಗೊಂಡ ಜಿಲ್ಲಾ ಜಾಗೃತಿ ಸಮಿತಿ ರಚಿಸಲಾಯಿತು. ಡಿ.ಎನ್.ಯೋಗೀಶ್ವರಪ್ಪ, ಎಂ.ಎಚ್.ನಾಗರಾಜು, ಎಂ.ವಿ.ಶಂಕರಾನಂದ, ಸಣ್ಣಹೊನ್ನಯ್ಯ ಕಂಟಲಗೆರೆ, ಟಿ.ಆರ್.ಲೀಲಾವತಿ, ರಾಣಿ ಚಂದ್ರಶೇಖರ್, ಚಿಕ್ಕಬೆಳ್ಳಾವಿ ಶಿವಕುಮಾರ್, ರೇಣುಕಾಪ್ರಸಾದ್, ಎಂ.ಗೋವಿಂದರಾಯ, ಕಮಲಾ ರಾಜೇಶ್ ಅವರನ್ನು ಸಮಿತಿಗೆ ನೇಮಿಸಲಾಯಿತು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>