<p><strong>ತುಮಕೂರು</strong>: ಟಾಸ್ಕ್ಗಳಿಗೆ ಹಣ ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ತುರುವೇಕೆರೆ ತಾಲ್ಲೂಕಿನ ಮುದ್ದನಹಳ್ಳಿ ಹೊಸೂರಿನ ಬಸವರಾಜು ಎಂಬುವರು ₹7.44 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಆರೋಪಿಗಳು ಕರೆ ಮಾಡಿ, ‘ನೀವು ರಿಲಿಯನ್ಸ್ ಪ್ರಾಪರ್ಟಿಸ್ಗೆ ಸದಸ್ಯರಾಗಿದ್ದು, ನಿಮಗೆ ಮೂರು ಸ್ಲಾಟ್ಗಳನ್ನು ಕೊಡುತ್ತೇವೆ. ಅದನ್ನು ಪೂರ್ಣಗೊಳಿಸಿದರೆ ಹಣ ನೀಡಲಾಗುವುದು’ ಎಂದಿದ್ದಾರೆ. ಇದಾದ ಬಳಿಕ ಬಸವರಾಜು ಖಾತೆಗೆ ₹820 ವರ್ಗಾಯಿಸಿದ್ದಾರೆ. ಸ್ಲಾಟ್ ಮುಂದುವರಿಸಲು ₹11,228 ರೀಚಾರ್ಜ್ ಮಾಡಬೇಕು ಎಂದು ತಿಳಿಸಿದ್ದಾರೆ. ಬಸವರಾಜು ತಮ್ಮ ಪತ್ನಿ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದು, ವಾಪಸ್ ₹18 ಸಾವಿರ ಅವರ ಖಾತೆಗೆ ಹಾಕಿದ್ದಾರೆ.</p>.<p>ಸ್ಲಾಟ್ ಮುಂದುವರಿಸಲು ಮತ್ತಷ್ಟು ರೀಚಾರ್ಜ್ ಮಾಡಬೇಕು ಎಂದು ₹10 ಸಾವಿರ ಪಡೆದಿದ್ದಾರೆ. ಇದೇ ಕಾರಣ ಹೇಳಿ ಡಿ. 7ರಿಂದ 12ರ ವರೆಗೆ ಹಂತ ಹಂತವಾಗಿ ಒಟ್ಟು ₹7,62,131 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಅವರಿಗೆ ಕೇವಲ ₹18 ಸಾವಿರ ಹಿಂದಿರುಗಿಸಿದ್ದಾರೆ.</p>.<p>ಇದುವರೆಗೆ ವರ್ಗಾವಣೆ ಮಾಡಿದ ಹಣ ವಾಪಸ್ ಕೊಡುವಂತೆ ಬಸವರಾಜು ಕೇಳಿದ್ದಾರೆ. ‘ಇನ್ನೂ ₹4.60 ಲಕ್ಷ ಕಟ್ಟಿದರೆ ಮಾತ್ರ ಹಣ ನೀಡಲಾಗುತ್ತದೆ’ ಎಂದು ಆರೋಪಿಗಳು ಹೇಳಿದ್ದಾರೆ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಟಾಸ್ಕ್ಗಳಿಗೆ ಹಣ ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ತುರುವೇಕೆರೆ ತಾಲ್ಲೂಕಿನ ಮುದ್ದನಹಳ್ಳಿ ಹೊಸೂರಿನ ಬಸವರಾಜು ಎಂಬುವರು ₹7.44 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಆರೋಪಿಗಳು ಕರೆ ಮಾಡಿ, ‘ನೀವು ರಿಲಿಯನ್ಸ್ ಪ್ರಾಪರ್ಟಿಸ್ಗೆ ಸದಸ್ಯರಾಗಿದ್ದು, ನಿಮಗೆ ಮೂರು ಸ್ಲಾಟ್ಗಳನ್ನು ಕೊಡುತ್ತೇವೆ. ಅದನ್ನು ಪೂರ್ಣಗೊಳಿಸಿದರೆ ಹಣ ನೀಡಲಾಗುವುದು’ ಎಂದಿದ್ದಾರೆ. ಇದಾದ ಬಳಿಕ ಬಸವರಾಜು ಖಾತೆಗೆ ₹820 ವರ್ಗಾಯಿಸಿದ್ದಾರೆ. ಸ್ಲಾಟ್ ಮುಂದುವರಿಸಲು ₹11,228 ರೀಚಾರ್ಜ್ ಮಾಡಬೇಕು ಎಂದು ತಿಳಿಸಿದ್ದಾರೆ. ಬಸವರಾಜು ತಮ್ಮ ಪತ್ನಿ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದು, ವಾಪಸ್ ₹18 ಸಾವಿರ ಅವರ ಖಾತೆಗೆ ಹಾಕಿದ್ದಾರೆ.</p>.<p>ಸ್ಲಾಟ್ ಮುಂದುವರಿಸಲು ಮತ್ತಷ್ಟು ರೀಚಾರ್ಜ್ ಮಾಡಬೇಕು ಎಂದು ₹10 ಸಾವಿರ ಪಡೆದಿದ್ದಾರೆ. ಇದೇ ಕಾರಣ ಹೇಳಿ ಡಿ. 7ರಿಂದ 12ರ ವರೆಗೆ ಹಂತ ಹಂತವಾಗಿ ಒಟ್ಟು ₹7,62,131 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಅವರಿಗೆ ಕೇವಲ ₹18 ಸಾವಿರ ಹಿಂದಿರುಗಿಸಿದ್ದಾರೆ.</p>.<p>ಇದುವರೆಗೆ ವರ್ಗಾವಣೆ ಮಾಡಿದ ಹಣ ವಾಪಸ್ ಕೊಡುವಂತೆ ಬಸವರಾಜು ಕೇಳಿದ್ದಾರೆ. ‘ಇನ್ನೂ ₹4.60 ಲಕ್ಷ ಕಟ್ಟಿದರೆ ಮಾತ್ರ ಹಣ ನೀಡಲಾಗುತ್ತದೆ’ ಎಂದು ಆರೋಪಿಗಳು ಹೇಳಿದ್ದಾರೆ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>