<p><strong>ತುಮಕೂರು:</strong> ದೇಶದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಜವಾಬ್ದಾರಿಯಿಂದ ಗಣತಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ಮಾಡಿದರು.</p>.<p>ನಗರದ ಮಹಾನಗರ ಪಾಲಿಕೆಯಲ್ಲಿ ಸೋಮವಾರ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜನಗಣತಿಯ ಅಂಕಿ-ಅಂಶಗಳೇ ಆಧಾರ. ಸರ್ಕಾರದ ಯೋಜನೆ, ಕ್ಷೇತ್ರ ವಿಂಗಡಣೆ ಎಲ್ಲವೂ ಜನಸಂಖ್ಯೆ ಮೇಲೆ ನಿರ್ಧಾರವಾಗುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ನೆರವು ತಲುಪಿಸಲು ಸಮಗ್ರ ಮಾಹಿತಿಯ ಅಗತ್ಯವಿದೆ. ಗಣತಿದಾರರು ಯಾವುದೇ ಪೂರ್ವಗ್ರಹವಿಲ್ಲದೆ ಸರಿಯಾದ ಮಾಹಿತಿ ಸಂಗ್ರಹಿಸಬೇಕು ಎಂದರು.</p>.<p>ಸಂವಹನ, ವಿಶ್ವಾಸಾರ್ಹತೆ ಹಾಗೂ ಮಾಹಿತಿ ಸಂಗ್ರಹ ಗಣತಿಯ ಪ್ರಮುಖ ಅಂಶ. ಆರಂಭದಲ್ಲಿ ನಿರಾಸಕ್ತಿ ಮೂಡಬಹುದು. ಇದು ಜವಾಬ್ದಾರಿ, ಕರ್ತವ್ಯ ಎಂಬುದನ್ನು ಮರೆಯಬಾರದು. ಎಲ್ಲಾ ಸಂದೇಹ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜನಗಣತಿ ಸಂಪನ್ಮೂಲ ವ್ಯಕ್ತಿಗಳಾದ ಆರ್.ಎಸ್.ಶರ್ಮಾ, ಭವ್ಯಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ದೇಶದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಜವಾಬ್ದಾರಿಯಿಂದ ಗಣತಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ಮಾಡಿದರು.</p>.<p>ನಗರದ ಮಹಾನಗರ ಪಾಲಿಕೆಯಲ್ಲಿ ಸೋಮವಾರ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜನಗಣತಿಯ ಅಂಕಿ-ಅಂಶಗಳೇ ಆಧಾರ. ಸರ್ಕಾರದ ಯೋಜನೆ, ಕ್ಷೇತ್ರ ವಿಂಗಡಣೆ ಎಲ್ಲವೂ ಜನಸಂಖ್ಯೆ ಮೇಲೆ ನಿರ್ಧಾರವಾಗುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ನೆರವು ತಲುಪಿಸಲು ಸಮಗ್ರ ಮಾಹಿತಿಯ ಅಗತ್ಯವಿದೆ. ಗಣತಿದಾರರು ಯಾವುದೇ ಪೂರ್ವಗ್ರಹವಿಲ್ಲದೆ ಸರಿಯಾದ ಮಾಹಿತಿ ಸಂಗ್ರಹಿಸಬೇಕು ಎಂದರು.</p>.<p>ಸಂವಹನ, ವಿಶ್ವಾಸಾರ್ಹತೆ ಹಾಗೂ ಮಾಹಿತಿ ಸಂಗ್ರಹ ಗಣತಿಯ ಪ್ರಮುಖ ಅಂಶ. ಆರಂಭದಲ್ಲಿ ನಿರಾಸಕ್ತಿ ಮೂಡಬಹುದು. ಇದು ಜವಾಬ್ದಾರಿ, ಕರ್ತವ್ಯ ಎಂಬುದನ್ನು ಮರೆಯಬಾರದು. ಎಲ್ಲಾ ಸಂದೇಹ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜನಗಣತಿ ಸಂಪನ್ಮೂಲ ವ್ಯಕ್ತಿಗಳಾದ ಆರ್.ಎಸ್.ಶರ್ಮಾ, ಭವ್ಯಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>