<p><strong>ಶಿರಾ</strong>: ತುಮಕೂರು- ಚಿತ್ರದುರ್ಗ, ತುಮಕೂರು– ರಾಯದುರ್ಗ ಎರಡು ರೈಲ್ವೆ ಯೋಜನೆಗಳನ್ನು 2027ರ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಗುರುವಾರ ತುಮಕೂರು- ಚಿತ್ರದುರ್ಗ ರೈಲ್ವೆ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ತುಮಕೂರು- ಚಿತ್ರದುರ್ಗ ರೈಲ್ವೆ ಯೋಜನೆ ಈ ಭಾಗದ ಜನರ ಕನಸಾಗಿದೆ. ಹಲವು ವರ್ಷಗಳ ಹೋರಾಟದ ಫಲವಾಗಿ ಯೋಜನೆ ರೂಪುಗೊಳ್ಳುತ್ತಿದ್ದು ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದರು.</p>.<p>ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದು ತ್ವರಿತವಾಗಿ ಕಾಮಗಾರಿ ನಡೆಯುತ್ತಿದೆ. ಇದುವರೆಗೂ ಭೂಸ್ವಾಧೀನ ಕಾಮಗಾರಿ ನಡೆಯದೆ ಕಾಮಗಾರಿ ವಿಳಂಬವಾಗಿತ್ತು. ಈಗ ಸಮಸ್ಯೆ ಬಗೆಹರಿಸಲಾಗಿದೆ. ಕೆರೆಗಳಲ್ಲಿ ಹೂಳೆತ್ತುವ ಮಣ್ಣನ್ನು ರೈಲ್ವೆ ಕಾಮಗಾರಿಗೆ ಬಳಕೆಗೆ ಶಾಸಕ ಟಿ.ಬಿ.ಜಯಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದು ಸುಮಾರು 25 ಕೆರೆಗಳನ್ನು ಮಣ್ಣು ಬಳಕೆ ಮಾಡಿಕೊಳ್ಳಲಾಗುವುದು ಎಂದರು.</p>.<p>ಎರಡು ರೈಲ್ವೆ ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ-234ರ ಶಿರಾ- ಬಡವನಹಳ್ಳಿ ನಡುವೆ 25.2 ಕಿ.ಮೀ ರಸ್ತೆಯ ₹634 ಕೋಟಿ ವೆಚ್ಚದ ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ. ಭೂ ಸ್ವಾಧೀನ ಮಾಡಿಕೊಂಡು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.</p>.<p>ಮಧುಗಿರಿ ಏಕಶಿಲಾ ಬೆಟ್ಟ, ದೇವರಾಯನದುರ್ಗಾ, ನಂದಿಬೆಟ್ಟಕ್ಕೆ ರೂಫ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p>ಶಾಸಕ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು.</p>
<p><strong>ಶಿರಾ</strong>: ತುಮಕೂರು- ಚಿತ್ರದುರ್ಗ, ತುಮಕೂರು– ರಾಯದುರ್ಗ ಎರಡು ರೈಲ್ವೆ ಯೋಜನೆಗಳನ್ನು 2027ರ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಗುರುವಾರ ತುಮಕೂರು- ಚಿತ್ರದುರ್ಗ ರೈಲ್ವೆ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ತುಮಕೂರು- ಚಿತ್ರದುರ್ಗ ರೈಲ್ವೆ ಯೋಜನೆ ಈ ಭಾಗದ ಜನರ ಕನಸಾಗಿದೆ. ಹಲವು ವರ್ಷಗಳ ಹೋರಾಟದ ಫಲವಾಗಿ ಯೋಜನೆ ರೂಪುಗೊಳ್ಳುತ್ತಿದ್ದು ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದರು.</p>.<p>ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದು ತ್ವರಿತವಾಗಿ ಕಾಮಗಾರಿ ನಡೆಯುತ್ತಿದೆ. ಇದುವರೆಗೂ ಭೂಸ್ವಾಧೀನ ಕಾಮಗಾರಿ ನಡೆಯದೆ ಕಾಮಗಾರಿ ವಿಳಂಬವಾಗಿತ್ತು. ಈಗ ಸಮಸ್ಯೆ ಬಗೆಹರಿಸಲಾಗಿದೆ. ಕೆರೆಗಳಲ್ಲಿ ಹೂಳೆತ್ತುವ ಮಣ್ಣನ್ನು ರೈಲ್ವೆ ಕಾಮಗಾರಿಗೆ ಬಳಕೆಗೆ ಶಾಸಕ ಟಿ.ಬಿ.ಜಯಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದು ಸುಮಾರು 25 ಕೆರೆಗಳನ್ನು ಮಣ್ಣು ಬಳಕೆ ಮಾಡಿಕೊಳ್ಳಲಾಗುವುದು ಎಂದರು.</p>.<p>ಎರಡು ರೈಲ್ವೆ ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ-234ರ ಶಿರಾ- ಬಡವನಹಳ್ಳಿ ನಡುವೆ 25.2 ಕಿ.ಮೀ ರಸ್ತೆಯ ₹634 ಕೋಟಿ ವೆಚ್ಚದ ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ. ಭೂ ಸ್ವಾಧೀನ ಮಾಡಿಕೊಂಡು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.</p>.<p>ಮಧುಗಿರಿ ಏಕಶಿಲಾ ಬೆಟ್ಟ, ದೇವರಾಯನದುರ್ಗಾ, ನಂದಿಬೆಟ್ಟಕ್ಕೆ ರೂಫ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p>ಶಾಸಕ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು.</p>