ಕೊರೊನಾ ವೈರಸ್ ಸೋಂಕಿನಿಂದ ಜನರನ್ನು ಪಾರು ಮಾಡಲು ಸಾವಿರಾರು ಮಂದಿ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಊಟ, ನಿದ್ರೆ ಬಿಟ್ಟು ಹಗಲು ರಾತ್ರಿ ದುಡಿಯುತ್ತಿದ್ದಾರೆ. ಆದರೆ ತಮಗೆ ಒಪ್ಪಿಸಿದ ಒಂದು ಸಣ್ಣ ಜವಾಬ್ದಾರಿಯನ್ನು ಈ ಅಧಿಕಾರಿ ಎಷ್ಟು ಬೇಜವಬ್ದಾರಿಯಿಂದ ನಿರ್ವಹಿಸುತ್ತಿದ್ದಾರೆ. ಸಾವಿರಾರು ಜನರ ಶ್ರಮ ಹಾಳು ಮಾಡಲು ಇಂತಹ ಒಬ್ಬರು ಸಾಕಲ್ಲವೇ? ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.