<p><strong>ತುಮಕೂರು</strong>: ನಗರದ ಹೊರ ವಲಯದ ಅಮಾಲಪುರ ಬಳಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿಕೊಡಲು ಜಿಲ್ಲಾ ಆಡಳಿತಕ್ಕೆ ಇನ್ನೂ ಒಂದು ವಾರ ಗಡುವು ನೀಡಲು ವಕೀಲರ ಸಭೆಯಲ್ಲಿ ನಿರ್ಧರಿಸಲಾಯಿತು.</p><p>ನಗರದಲ್ಲಿ ಮಂಗಳವಾರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.</p><p>‘ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆ ನಡೆಸಿದ ನಂತರ ಜಾಗ ನೀಡುವ ಸಂಬಂಧ ಒಂದಿಷ್ಟು ಪ್ರಕ್ರಿಯೆಗಳು ನಡೆದಿವೆ. ಹೀಗಾಗಿ ಜಿಲ್ಲಾಡಳಿತಕ್ಕೆ ಇನ್ನೂ ಸ್ವಲ್ಪ ದಿನ ಕಾಲಾವಕಾಶ ನೀಡೋಣ' ಎಂದು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ರವಿಗೌಡ ಸಭೆಗೆ ತಿಳಿಸಿದರು.</p><p>ನ್ಯಾಯಾಲಯ ಸಂಕೀರ್ಣಕ್ಕಾಗಿ 20 ಎಕರೆ ಜಾಗ ನೀಡುವಂತೆ ಕೋರಲಾಗಿದೆ. ಜಾಗ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡುವಂತೆ ಈ ಹಿಂದೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೋರಿದ್ದರು. ನೀಡಿದ್ದ ಕಾಲಾವಕಾಶ ಮುಗಿದಿದ್ದರೂ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡಿಲ್ಲ ಎಂದು ವಕೀಲರು ಅಸಮಾಧಾನ ವ್ಯಕ್ತಪಡಿಸಿದರು.</p><p>ಒಟ್ಟು 20 ಎಕರೆ ಜಾಗ ನೀಡಬೇಕು. ಇಲ್ಲದಿದ್ದರೆ ಭವಿಷ್ಯದ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಷ್ಟಕರವಾಗಲಿದೆ. ಈಗಿರುವ ನ್ಯಾಯಾಲಯದಲ್ಲಿ ಕಲಾಪ ನಡೆಸುವುದೇ ಕಷ್ಟವಾಗಿದೆ. ಕಕ್ಷಿದಾರರು, ವಕೀಲರು, ನ್ಯಾಯಾಂಗ ಸಿಬ್ಬಂದಿಗೆ ಸ್ಥಳಾವಕಾಶವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಹೇಳಿದರು.</p>.<p>ವಕೀಲ ಮಂಜುನಾಥ್ ಪ್ರತಿಭಟನೆ ಮಾಡದೇ ಬೇರೆ ಮಾರ್ಗವಿಲ್ಲ ಎಂದರು. ವಕೀಲರಾದ ಶಿವಕುಮಾರ್, ಸಿ.ಕೆ.ಮಹೇಂದ್ರ, ಓಬಣ್ಣ, ಬಿ.ಜಿ.ನಾಗರಾಜ್, ಜಿಲ್ಲಾಡಳಿತಕ್ಕೆ ಒಂದು ವಾರ ಸಮಯ ನೀಡಿ, ನಂತರ ಪ್ರತಿಭಟನೆ ನಿರ್ಧಾರಕ್ಕೆ ಬರೋಣ’ ಎಂದು ಸಲಹೆ ಮಾಡಿದರು.</p>.<p>ಈ ಮಧ್ಯೆ ಅಮಲಾಪುರದಲ್ಲಿರುವ ಸರ್ಕಾರಿ ಜಾಗ, ಅರಣ್ಯ ಇಲಾಖೆಗೆ ಸೇರಿದ ಭೂಮಿ ಒತ್ತುವರಿ ಬಗ್ಗೆ ತನಿಖೆ ನಡೆಸಲು ಕಂದಾಯ ಇಲಾಖೆ ಆಯುಕ್ತರು ಆದೇಶಿಸಿದ್ದು, ಅದಕ್ಕಾಗಿ ವಿಶೇಷ ತಂಡ ರಚಿಸಿದ್ದಾರೆ.</p>.<p>ಕಷರ್ಗಳ ಲಾಬಿಗೆ ಮಣಿದು ಜಾಗ ನೀಡಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಈಗ ಇಡೀ ಜಾಗದ ಸರ್ವೆಗೆ ಸರ್ಕಾರವೇ ತನಿಖಾ ತಂಡ ನೇಮಕ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರದ ಹೊರ ವಲಯದ ಅಮಾಲಪುರ ಬಳಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿಕೊಡಲು ಜಿಲ್ಲಾ ಆಡಳಿತಕ್ಕೆ ಇನ್ನೂ ಒಂದು ವಾರ ಗಡುವು ನೀಡಲು ವಕೀಲರ ಸಭೆಯಲ್ಲಿ ನಿರ್ಧರಿಸಲಾಯಿತು.</p><p>ನಗರದಲ್ಲಿ ಮಂಗಳವಾರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.</p><p>‘ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆ ನಡೆಸಿದ ನಂತರ ಜಾಗ ನೀಡುವ ಸಂಬಂಧ ಒಂದಿಷ್ಟು ಪ್ರಕ್ರಿಯೆಗಳು ನಡೆದಿವೆ. ಹೀಗಾಗಿ ಜಿಲ್ಲಾಡಳಿತಕ್ಕೆ ಇನ್ನೂ ಸ್ವಲ್ಪ ದಿನ ಕಾಲಾವಕಾಶ ನೀಡೋಣ' ಎಂದು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ರವಿಗೌಡ ಸಭೆಗೆ ತಿಳಿಸಿದರು.</p><p>ನ್ಯಾಯಾಲಯ ಸಂಕೀರ್ಣಕ್ಕಾಗಿ 20 ಎಕರೆ ಜಾಗ ನೀಡುವಂತೆ ಕೋರಲಾಗಿದೆ. ಜಾಗ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡುವಂತೆ ಈ ಹಿಂದೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೋರಿದ್ದರು. ನೀಡಿದ್ದ ಕಾಲಾವಕಾಶ ಮುಗಿದಿದ್ದರೂ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡಿಲ್ಲ ಎಂದು ವಕೀಲರು ಅಸಮಾಧಾನ ವ್ಯಕ್ತಪಡಿಸಿದರು.</p><p>ಒಟ್ಟು 20 ಎಕರೆ ಜಾಗ ನೀಡಬೇಕು. ಇಲ್ಲದಿದ್ದರೆ ಭವಿಷ್ಯದ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಷ್ಟಕರವಾಗಲಿದೆ. ಈಗಿರುವ ನ್ಯಾಯಾಲಯದಲ್ಲಿ ಕಲಾಪ ನಡೆಸುವುದೇ ಕಷ್ಟವಾಗಿದೆ. ಕಕ್ಷಿದಾರರು, ವಕೀಲರು, ನ್ಯಾಯಾಂಗ ಸಿಬ್ಬಂದಿಗೆ ಸ್ಥಳಾವಕಾಶವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಹೇಳಿದರು.</p>.<p>ವಕೀಲ ಮಂಜುನಾಥ್ ಪ್ರತಿಭಟನೆ ಮಾಡದೇ ಬೇರೆ ಮಾರ್ಗವಿಲ್ಲ ಎಂದರು. ವಕೀಲರಾದ ಶಿವಕುಮಾರ್, ಸಿ.ಕೆ.ಮಹೇಂದ್ರ, ಓಬಣ್ಣ, ಬಿ.ಜಿ.ನಾಗರಾಜ್, ಜಿಲ್ಲಾಡಳಿತಕ್ಕೆ ಒಂದು ವಾರ ಸಮಯ ನೀಡಿ, ನಂತರ ಪ್ರತಿಭಟನೆ ನಿರ್ಧಾರಕ್ಕೆ ಬರೋಣ’ ಎಂದು ಸಲಹೆ ಮಾಡಿದರು.</p>.<p>ಈ ಮಧ್ಯೆ ಅಮಲಾಪುರದಲ್ಲಿರುವ ಸರ್ಕಾರಿ ಜಾಗ, ಅರಣ್ಯ ಇಲಾಖೆಗೆ ಸೇರಿದ ಭೂಮಿ ಒತ್ತುವರಿ ಬಗ್ಗೆ ತನಿಖೆ ನಡೆಸಲು ಕಂದಾಯ ಇಲಾಖೆ ಆಯುಕ್ತರು ಆದೇಶಿಸಿದ್ದು, ಅದಕ್ಕಾಗಿ ವಿಶೇಷ ತಂಡ ರಚಿಸಿದ್ದಾರೆ.</p>.<p>ಕಷರ್ಗಳ ಲಾಬಿಗೆ ಮಣಿದು ಜಾಗ ನೀಡಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಈಗ ಇಡೀ ಜಾಗದ ಸರ್ವೆಗೆ ಸರ್ಕಾರವೇ ತನಿಖಾ ತಂಡ ನೇಮಕ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>