<p><strong>ತಿಪಟೂರು:</strong> ತುಮಕೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 10 ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.</p>.<p>ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ದಸರಾ ಆಚರಣೆ ವಿಷಯವಾಗಿ ಏರ್ಪಡಿಸಿದ್ದ ಪ್ರಬಂಧ ಹಾಗೂ ಆಶುಭಾಶಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.</p>.<p>ಈ ಬಾರಿಯ ದಸರಾದಲ್ಲಿ ವಿಶೇಷವಾಗಿ ಪ್ಯಾರಾ ಗ್ಲೈಡಿಂಗ್ ಮತ್ತು ಹೆಲಿಕಾಪ್ಟರಿಂಗ್ ಆಯೋಜಿಸಲಾಗಿದೆ. ಅರ್ಜುನ್ ಜನ್ಯ ಮ್ಯೂಸಿಕಲ್ ನೈಟ್ಸ್ ಇರಲಿದೆ. ನಟಿ ರಮ್ಯಾ ಹಾಗೂ ನಟ ವಿನಯ್ ರಾಜಕುಮಾರ್ ಭಾಗವಹಿಸಲಿದ್ದಾರೆ ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಸ್ವತಃ ಮುತುವರ್ಜಿವಹಿಸಿ ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿಸಲು ಪ್ರಯತ್ನಿಸುತ್ತಿದ್ದು ಮೂರು ಆನೆಗಳು ಉತ್ಸವದಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದಲೂ ತುಮಕೂರಿಗೆ ಹೋಗಿ ಬರಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎನ್.ಕಾಂತರಾಜು, ಪ್ರಾಂಶುಪಾಲ ಶಶಿಕುಮಾರ್, ಕಸಾಪ ಅಧ್ಯಕ್ಷ ಎಂ.ಬಸವರಾಜಪ್ಪ, ದೇವರಾಜ ಅರಸು ನಿಗಮದ ತಮ್ಮಯ್ಯ, ಕೌಶಲ್ಯಪಥ ನಿರ್ದೇಶಕ, ದಿಲೀಪ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತುಮಕೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 10 ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.</p>.<p>ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ದಸರಾ ಆಚರಣೆ ವಿಷಯವಾಗಿ ಏರ್ಪಡಿಸಿದ್ದ ಪ್ರಬಂಧ ಹಾಗೂ ಆಶುಭಾಶಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.</p>.<p>ಈ ಬಾರಿಯ ದಸರಾದಲ್ಲಿ ವಿಶೇಷವಾಗಿ ಪ್ಯಾರಾ ಗ್ಲೈಡಿಂಗ್ ಮತ್ತು ಹೆಲಿಕಾಪ್ಟರಿಂಗ್ ಆಯೋಜಿಸಲಾಗಿದೆ. ಅರ್ಜುನ್ ಜನ್ಯ ಮ್ಯೂಸಿಕಲ್ ನೈಟ್ಸ್ ಇರಲಿದೆ. ನಟಿ ರಮ್ಯಾ ಹಾಗೂ ನಟ ವಿನಯ್ ರಾಜಕುಮಾರ್ ಭಾಗವಹಿಸಲಿದ್ದಾರೆ ಎಂದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಸ್ವತಃ ಮುತುವರ್ಜಿವಹಿಸಿ ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿಸಲು ಪ್ರಯತ್ನಿಸುತ್ತಿದ್ದು ಮೂರು ಆನೆಗಳು ಉತ್ಸವದಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದಲೂ ತುಮಕೂರಿಗೆ ಹೋಗಿ ಬರಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎನ್.ಕಾಂತರಾಜು, ಪ್ರಾಂಶುಪಾಲ ಶಶಿಕುಮಾರ್, ಕಸಾಪ ಅಧ್ಯಕ್ಷ ಎಂ.ಬಸವರಾಜಪ್ಪ, ದೇವರಾಜ ಅರಸು ನಿಗಮದ ತಮ್ಮಯ್ಯ, ಕೌಶಲ್ಯಪಥ ನಿರ್ದೇಶಕ, ದಿಲೀಪ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>