<p><strong>ಶಿರಾ:</strong> ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಎಐಟಿಯುಸಿ ಮತ್ತು ಸಿಐಟಿಯುಯಿಂದ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಸಿಡಿಪಿಒ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸುಪ್ರೀಂಕೋರ್ಟಿನ ತೀರ್ಪಿನಂತೆ ಅಂಗನವಾಡಿ ಉದ್ಯೋಗಿಗಳ ಗೌರವ ಸೇವೆಯನ್ನು ನಾಗರಿಕ ಸೇವೆಯಾಗಿ ಪರಿಗಣಿಸಿ, ಕಾರ್ಯಕರ್ತೆಯರು ‘ಸಿ’ ದರ್ಜೆ ಹಾಗೂ ಸಹಾಯಕಿಯರನ್ನು ‘ಡಿ’ ದರ್ಜೆ ನೌಕರರನ್ನಾಗಿ ಖಾಯಂಗೊಳಿಸಬೇಕು. ನಿವೃತ್ತರಾಗಿರುವ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಪಾವತಿಸಬೇಕು ಎಂದು ಒತ್ತಾಯಿಸಿದರು.</p>.<p>ಅಂಗನವಾಡಿ ಉದ್ಯೋಗಿಗಳಿಗೆ ಗೌರವಧನ ನೀಡುವ ಪದ್ಧತಿ ಬಿಟ್ಟು ಘನತೆಯುಕ್ತ ಜೀವನ ನಡೆಸಲು ₹26 ಸಾವಿರ ಕನಿಷ್ಠ ವೇತನ, ನಿವೃತ್ತರಿಗೆ ಮಾಸಿಕ ₹10 ಸಾವಿರ ಮಾಸಿಕ ಪಿಂಚಣಿ ನೀಡುವ ಯೋಜನೆಯನ್ನು ರೂಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.</p>.<p>ಪ್ರವಾಸಿ ಮಂದಿರದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಎಐಟಿಯುಸಿ ಬಣದವರು ತಾಲ್ಲೂಕು ಕಚೇರಿಗೆ ತೆರಳಿ ಗ್ರೇಡ್- 2 ತಹಶೀಲ್ದಾರ್ ನಾಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರೆ, ಸಿಐಟಿಯು ಬಣದವರು ಸಿಡಿಪಿಒ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಎಐಟಿಯುಸಿ ಮತ್ತು ಸಿಐಟಿಯುಯಿಂದ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಸಿಡಿಪಿಒ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸುಪ್ರೀಂಕೋರ್ಟಿನ ತೀರ್ಪಿನಂತೆ ಅಂಗನವಾಡಿ ಉದ್ಯೋಗಿಗಳ ಗೌರವ ಸೇವೆಯನ್ನು ನಾಗರಿಕ ಸೇವೆಯಾಗಿ ಪರಿಗಣಿಸಿ, ಕಾರ್ಯಕರ್ತೆಯರು ‘ಸಿ’ ದರ್ಜೆ ಹಾಗೂ ಸಹಾಯಕಿಯರನ್ನು ‘ಡಿ’ ದರ್ಜೆ ನೌಕರರನ್ನಾಗಿ ಖಾಯಂಗೊಳಿಸಬೇಕು. ನಿವೃತ್ತರಾಗಿರುವ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಪಾವತಿಸಬೇಕು ಎಂದು ಒತ್ತಾಯಿಸಿದರು.</p>.<p>ಅಂಗನವಾಡಿ ಉದ್ಯೋಗಿಗಳಿಗೆ ಗೌರವಧನ ನೀಡುವ ಪದ್ಧತಿ ಬಿಟ್ಟು ಘನತೆಯುಕ್ತ ಜೀವನ ನಡೆಸಲು ₹26 ಸಾವಿರ ಕನಿಷ್ಠ ವೇತನ, ನಿವೃತ್ತರಿಗೆ ಮಾಸಿಕ ₹10 ಸಾವಿರ ಮಾಸಿಕ ಪಿಂಚಣಿ ನೀಡುವ ಯೋಜನೆಯನ್ನು ರೂಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.</p>.<p>ಪ್ರವಾಸಿ ಮಂದಿರದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಎಐಟಿಯುಸಿ ಬಣದವರು ತಾಲ್ಲೂಕು ಕಚೇರಿಗೆ ತೆರಳಿ ಗ್ರೇಡ್- 2 ತಹಶೀಲ್ದಾರ್ ನಾಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರೆ, ಸಿಐಟಿಯು ಬಣದವರು ಸಿಡಿಪಿಒ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>