<p><strong>ತುಮಕೂರು</strong>: ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಕೇಂದ್ರ ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಏಕರೂಪ್ ಕೌರ್ ಸೋಮವಾರ ಪರಿಶೀಲಿಸಿದರು.</p>.<p>ತುಮಕೂರು, ಕೊರಟಗೆರೆ ಭಾಗದಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಡಿ ಕೈಗೊಂಡ ಕಾಮಗಾರಿ ವೀಕ್ಷಿಸಿದರು. ತಾಲ್ಲೂಕಿನ ಮಾಕೇನಹಳ್ಳಿ ಹತ್ತಿರ ಬದು ನಿರ್ಮಾಣ, ಊರ್ಡಿಗೆರೆ ಗ್ರಾಮದ ಚೆಕ್ ಡ್ಯಾಮ್ ಕಾಮಗಾರಿ ಪರಿಶೀಲನೆ ನಡೆಸಿದರು. ಕೊರಟಗೆರೆ ತಾಲ್ಲೂಕಿನ ಚಿನ್ನೇನನಳ್ಳಿ, ಲಕ್ಕಯ್ಯನಪಾಳ್ಯ, ಪಾತಗಾನಹಳ್ಳಿಯಲ್ಲಿ ಫಲಾನುಭವಿಗಳ ಜತೆ ಸಂವಾದ ನಡೆಸಿದರು.</p>.<p>ಇದಾದ ಬಳಿಕ ನಗರದ ಜಿ.ಪಂ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಸಾವಯವ ಕೃಷಿಗೆ ಒತ್ತು ನೀಡಬೇಕು. ಯೂರಿಯಾ ಸೇರಿದಂತೆ ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕು. ಈ ಕುರಿತು ರೈತರಿಗೆ ಶಿಕ್ಷಣ, ಮಾಹಿತಿ ಒದಗಿಸಿ, ಅವರ ಮನವೊಲಿಸಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲೆಯಲ್ಲಿ ರಾಗಿ, ತೆಂಗು ಬೆಳೆಗಾರರು ಹೆಚ್ಚಿದ್ದು ಅವರಿಗೆ ವೈಜ್ಞಾನಿಕ ಕೃಷಿಗೆ ಪ್ರೋತ್ಸಾಹಿಸಬೇಕು. ಸಿರಿ ಧಾನ್ಯ ಬೆಳೆಯಲು ಹೆಚ್ಚಿನ ಅವಕಾಶಗಳಿದ್ದು, ರೈತರಿಗೆ ಅಗತ್ಯ ಮಾಹಿತಿ ಮಾರ್ಗದರ್ಶನ ಮಾಡಬೇಕು ಎಂದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಉಪ ಕಾರ್ಯದರ್ಶಿ ಈಶ್ವರಪ್ಪ, ಕೃಷಿ ಜಂಟಿ ನಿರ್ದೇಶಕ ಲಕ್ಷ್ಮಣ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಬಿ.ಸಿ.ಶಾರದಮ್ಮ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-17-1926496450</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಕೇಂದ್ರ ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಏಕರೂಪ್ ಕೌರ್ ಸೋಮವಾರ ಪರಿಶೀಲಿಸಿದರು.</p>.<p>ತುಮಕೂರು, ಕೊರಟಗೆರೆ ಭಾಗದಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಡಿ ಕೈಗೊಂಡ ಕಾಮಗಾರಿ ವೀಕ್ಷಿಸಿದರು. ತಾಲ್ಲೂಕಿನ ಮಾಕೇನಹಳ್ಳಿ ಹತ್ತಿರ ಬದು ನಿರ್ಮಾಣ, ಊರ್ಡಿಗೆರೆ ಗ್ರಾಮದ ಚೆಕ್ ಡ್ಯಾಮ್ ಕಾಮಗಾರಿ ಪರಿಶೀಲನೆ ನಡೆಸಿದರು. ಕೊರಟಗೆರೆ ತಾಲ್ಲೂಕಿನ ಚಿನ್ನೇನನಳ್ಳಿ, ಲಕ್ಕಯ್ಯನಪಾಳ್ಯ, ಪಾತಗಾನಹಳ್ಳಿಯಲ್ಲಿ ಫಲಾನುಭವಿಗಳ ಜತೆ ಸಂವಾದ ನಡೆಸಿದರು.</p>.<p>ಇದಾದ ಬಳಿಕ ನಗರದ ಜಿ.ಪಂ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಸಾವಯವ ಕೃಷಿಗೆ ಒತ್ತು ನೀಡಬೇಕು. ಯೂರಿಯಾ ಸೇರಿದಂತೆ ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕು. ಈ ಕುರಿತು ರೈತರಿಗೆ ಶಿಕ್ಷಣ, ಮಾಹಿತಿ ಒದಗಿಸಿ, ಅವರ ಮನವೊಲಿಸಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲೆಯಲ್ಲಿ ರಾಗಿ, ತೆಂಗು ಬೆಳೆಗಾರರು ಹೆಚ್ಚಿದ್ದು ಅವರಿಗೆ ವೈಜ್ಞಾನಿಕ ಕೃಷಿಗೆ ಪ್ರೋತ್ಸಾಹಿಸಬೇಕು. ಸಿರಿ ಧಾನ್ಯ ಬೆಳೆಯಲು ಹೆಚ್ಚಿನ ಅವಕಾಶಗಳಿದ್ದು, ರೈತರಿಗೆ ಅಗತ್ಯ ಮಾಹಿತಿ ಮಾರ್ಗದರ್ಶನ ಮಾಡಬೇಕು ಎಂದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಉಪ ಕಾರ್ಯದರ್ಶಿ ಈಶ್ವರಪ್ಪ, ಕೃಷಿ ಜಂಟಿ ನಿರ್ದೇಶಕ ಲಕ್ಷ್ಮಣ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಬಿ.ಸಿ.ಶಾರದಮ್ಮ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-17-1926496450</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>