<p>ತುಮಕೂರು: ‘ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟ ನೋಡಿದರೆ ಅವರ ಆಯ್ಕೆಯ ಒಬ್ಬ ಸಚಿವರೂ ಇರುವಂತೆ ಕಾಣುವುದಿಲ್ಲ’ ಎಂದು ತುಮಕೂರು ಗ್ರಾಮೀಣ ಶಾಸಕ ಬಿ.ಸುರೇಶ್ ಗೌಡ ಹೇಳಿದ್ದಾರೆ.</p>.<p>‘ಒಬ್ಬ ಹೊಸ ನಾಯಕ ಬಂದಾಗ ಅವರು ತನ್ನ ಆಯ್ಕೆಯ ಜನರನ್ನು ಇಟ್ಟುಕೊಂಡು ಆಡಳಿತ ಮಾಡಬೇಕು ಎಂದು ಬಯಸುವುದು ಸಹಜ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹಿತಾಸಕ್ತಿಗಳು ಇರುವುದರಿಂದ ಅವರೆಲ್ಲರೂ ಸೇರಿಕೊಂಡು ಡಿಕೆಶಿ ಅವರನ್ನು ಕಟ್ಟಿ ಹಾಕಿದಂತೆ ಭಾಸವಾಗುತ್ತಿದೆ’ ಎಂದು ಪ್ರತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಮುಖ್ಯಮಂತ್ರಿಯಾಗಲು ದೊಡ್ಡ ತಪಸ್ಸನ್ನೇ ಮಾಡಬೇಕಾಗಿ ಬಂದ ಡಿ.ಕೆ.ಶಿವಕುಮಾರ್ ಅವರು ಈಗ ಹೊಸ ಬಾಟಲಿಯಲ್ಲಿ ಹಳೆಯ ಮದ್ಯ ಇಟ್ಟುಕೊಂಡು ಹೇಗೆ ರಾಜ್ಯಕ್ಕೆ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ಕೊಡುತ್ತಾರೆ ತಿಳಿಯದು. ಡಾ.ಯತೀಂದ್ರ ಸಿದ್ಧರಾಮಯ್ಯ ಅವರನ್ನು ಬಿಟ್ಟರೆ ಯಾವುದೇ ಹೊಸ ಮುಖ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಜಿ.ಪರಮೇಶ್ವರ ಅವರ ಸಾಮರ್ಥ್ಯಕ್ಕೆ ತಕ್ಕ ಖಾತೆ ದೊರೆತು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾಣುವಂತಾಗಲಿ’ ಎಂದು ಹೇಳಿದ್ದಾರೆ.</p>.<p>‘ಈ ಮೊದಲ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇಲ್ಲದೇ ಇರುವುದು ಕೂಡ ಎದ್ದು ಕಾಣುವ ಲೋಪ. ಕಾಂಗ್ರೆಸ್ನ ಮಹಿಳಾ ವಿರೋಧಿ ನೀತಿ ಇಲ್ಲಿಯೂ ಮುಂದುವರಿದಿದೆ’ ಎಂದು ಟೀಕಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-17-2000301800</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ‘ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟ ನೋಡಿದರೆ ಅವರ ಆಯ್ಕೆಯ ಒಬ್ಬ ಸಚಿವರೂ ಇರುವಂತೆ ಕಾಣುವುದಿಲ್ಲ’ ಎಂದು ತುಮಕೂರು ಗ್ರಾಮೀಣ ಶಾಸಕ ಬಿ.ಸುರೇಶ್ ಗೌಡ ಹೇಳಿದ್ದಾರೆ.</p>.<p>‘ಒಬ್ಬ ಹೊಸ ನಾಯಕ ಬಂದಾಗ ಅವರು ತನ್ನ ಆಯ್ಕೆಯ ಜನರನ್ನು ಇಟ್ಟುಕೊಂಡು ಆಡಳಿತ ಮಾಡಬೇಕು ಎಂದು ಬಯಸುವುದು ಸಹಜ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹಿತಾಸಕ್ತಿಗಳು ಇರುವುದರಿಂದ ಅವರೆಲ್ಲರೂ ಸೇರಿಕೊಂಡು ಡಿಕೆಶಿ ಅವರನ್ನು ಕಟ್ಟಿ ಹಾಕಿದಂತೆ ಭಾಸವಾಗುತ್ತಿದೆ’ ಎಂದು ಪ್ರತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಮುಖ್ಯಮಂತ್ರಿಯಾಗಲು ದೊಡ್ಡ ತಪಸ್ಸನ್ನೇ ಮಾಡಬೇಕಾಗಿ ಬಂದ ಡಿ.ಕೆ.ಶಿವಕುಮಾರ್ ಅವರು ಈಗ ಹೊಸ ಬಾಟಲಿಯಲ್ಲಿ ಹಳೆಯ ಮದ್ಯ ಇಟ್ಟುಕೊಂಡು ಹೇಗೆ ರಾಜ್ಯಕ್ಕೆ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ಕೊಡುತ್ತಾರೆ ತಿಳಿಯದು. ಡಾ.ಯತೀಂದ್ರ ಸಿದ್ಧರಾಮಯ್ಯ ಅವರನ್ನು ಬಿಟ್ಟರೆ ಯಾವುದೇ ಹೊಸ ಮುಖ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಜಿ.ಪರಮೇಶ್ವರ ಅವರ ಸಾಮರ್ಥ್ಯಕ್ಕೆ ತಕ್ಕ ಖಾತೆ ದೊರೆತು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾಣುವಂತಾಗಲಿ’ ಎಂದು ಹೇಳಿದ್ದಾರೆ.</p>.<p>‘ಈ ಮೊದಲ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇಲ್ಲದೇ ಇರುವುದು ಕೂಡ ಎದ್ದು ಕಾಣುವ ಲೋಪ. ಕಾಂಗ್ರೆಸ್ನ ಮಹಿಳಾ ವಿರೋಧಿ ನೀತಿ ಇಲ್ಲಿಯೂ ಮುಂದುವರಿದಿದೆ’ ಎಂದು ಟೀಕಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-17-2000301800</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>