<p><strong>ತುಮಕೂರು</strong>: ಹೆರಿಗೆ ಮಾಡಿಸಲು ಲಂಚ ಪಡೆದಿದ್ದ ಜಿಲ್ಲಾ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿದ್ದ ಡಾ.ಸಿ.ಎನ್.ಮಹಾಲಕ್ಷ್ಮಮ್ಮ ಎಂಬಾಕೆಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಶನಿವಾರ ಆದೇಶಿಸಿದೆ.</p>.<p>ನಗರದ ಕೋತಿತೋಪು ನಿವಾಸಿಯಾದ ಜಿ.ಟಿ.ಮುಕುಂದ ಎಂಬುವರು ತಮ್ಮ ನಾದಿನಿ ಸವಿತಾ ಅವರನ್ನು ಹೆರಿಗೆ ಸಲುವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಹೆರಿಗೆ ಮಾಡಿಸಲು ಡಾ.ಸಿ.ಎನ್.ಮಹಾಲಕ್ಷ್ಮಮ್ಮ ₹3 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು. ಲಂಚ ಕೊಡಲು ಇಷ್ಟವಿಲ್ಲದಿದ್ದರೂ ತಾಯಿ, ಮಗುವಿನ ಆರೋಗ್ಯದ ದೃಷ್ಟಿಯಿಂದ 2021 ಫೆಬ್ರುವರಿ 2ರಂದು ₹2 ಸಾವಿರ ಲಂಚ ಕೊಟ್ಟಿದ್ದರು.</p>.<p>ಆಸ್ಪತ್ರೆ ಡಿ ಗ್ರೂಪ್ ಸೌಕರ ಬರಕತ್ ಅಲಿ ಅವರಿಗೆ ಲಂಚದ ಹಣ ಕೊಡಿಸಿ, ಅವರಿಂದ ಸಿ.ಎನ್.ಮಹಾಲಕ್ಷ್ಮಮ್ಮ ಪಡೆದುಕೊಂಡಿದ್ದರು. ಈ ಬಗ್ಗೆ 2021 ಫೆ. 4ರಂದು ಲೋಕಾಯುಕ್ತ ಪೊಲೀಸರಿಗೆ ಮುಕುಂದ ದೂರು ನೀಡಿದ್ದರು. ತನಿಖೆ ನಡೆಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಾದ ಎನ್.ವಿರೇಂದ್ರ, ಜಿ.ಮಂಜುನಾಥ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಯಾಸ್ಮಿನ ಪರವಿನ ಲಾಡಖಾನ ಶಿಕ್ಷೆ ವಿಧಿಸಿದ್ದಾರೆ. ಲೋಕಾಯುಕ್ತ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎನ್.ಬಸವರಾಜು ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಹೆರಿಗೆ ಮಾಡಿಸಲು ಲಂಚ ಪಡೆದಿದ್ದ ಜಿಲ್ಲಾ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿದ್ದ ಡಾ.ಸಿ.ಎನ್.ಮಹಾಲಕ್ಷ್ಮಮ್ಮ ಎಂಬಾಕೆಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಶನಿವಾರ ಆದೇಶಿಸಿದೆ.</p>.<p>ನಗರದ ಕೋತಿತೋಪು ನಿವಾಸಿಯಾದ ಜಿ.ಟಿ.ಮುಕುಂದ ಎಂಬುವರು ತಮ್ಮ ನಾದಿನಿ ಸವಿತಾ ಅವರನ್ನು ಹೆರಿಗೆ ಸಲುವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಹೆರಿಗೆ ಮಾಡಿಸಲು ಡಾ.ಸಿ.ಎನ್.ಮಹಾಲಕ್ಷ್ಮಮ್ಮ ₹3 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು. ಲಂಚ ಕೊಡಲು ಇಷ್ಟವಿಲ್ಲದಿದ್ದರೂ ತಾಯಿ, ಮಗುವಿನ ಆರೋಗ್ಯದ ದೃಷ್ಟಿಯಿಂದ 2021 ಫೆಬ್ರುವರಿ 2ರಂದು ₹2 ಸಾವಿರ ಲಂಚ ಕೊಟ್ಟಿದ್ದರು.</p>.<p>ಆಸ್ಪತ್ರೆ ಡಿ ಗ್ರೂಪ್ ಸೌಕರ ಬರಕತ್ ಅಲಿ ಅವರಿಗೆ ಲಂಚದ ಹಣ ಕೊಡಿಸಿ, ಅವರಿಂದ ಸಿ.ಎನ್.ಮಹಾಲಕ್ಷ್ಮಮ್ಮ ಪಡೆದುಕೊಂಡಿದ್ದರು. ಈ ಬಗ್ಗೆ 2021 ಫೆ. 4ರಂದು ಲೋಕಾಯುಕ್ತ ಪೊಲೀಸರಿಗೆ ಮುಕುಂದ ದೂರು ನೀಡಿದ್ದರು. ತನಿಖೆ ನಡೆಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಾದ ಎನ್.ವಿರೇಂದ್ರ, ಜಿ.ಮಂಜುನಾಥ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಯಾಸ್ಮಿನ ಪರವಿನ ಲಾಡಖಾನ ಶಿಕ್ಷೆ ವಿಧಿಸಿದ್ದಾರೆ. ಲೋಕಾಯುಕ್ತ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎನ್.ಬಸವರಾಜು ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>