<p><strong>ತುಮಕೂರು:</strong> ಜಿಲ್ಲೆಯಲ್ಲಿ 57 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲು ಸಿದ್ಧತೆ ನಡೆದಿದ್ದು, ಈಗಾಗಲೇ 18 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲಾಗಿದೆ.</p>.<p>ಕೊರಟಗೆರೆ ತಾಲ್ಲೂಕಿನ ಅನುಪಲು, ಬಿ.ಎಂ.ಪಾಳ್ಯ, ಪಕ್ಕಿರಪ್ಪನ ಪಾಳ್ಯ, ಗೊಂದಿಹಳ್ಳಿ ಪ್ಲಾಂಟೇಷನ್, ಭದ್ರಯ್ಯನಪಾಳ್ಯ, ಹನುಮಂತಗಿರಿ; ತಿಪಟೂರು ತಾಲ್ಲೂಕಿನ ತಿಮ್ಲಾಪುರ, ಹುಣಸೇಘಟ್ಟ, ಮಾನವನಘಟ್ಟ, ಬೀರಸಂದ್ರ, ರಾಮಚಂದ್ರಪುರ, ಗಂಗನಘಟ್ಟ; ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಿಳಿಕಲ್ಲು ಗೊಲ್ಲರಹಟ್ಟಿ, ವಡ್ಡೇರಹಳ್ಳಿ, ಬಂಗಾರಗೆರೆ ಪಾಳ್ಯ, ದುರ್ಗದ ಸೀಮೆ ಪಾಳ್ಯ, ಎಂ.ಜಿ.ಪಾಳ್ಯ, ಅಡಾಣೆಕಲ್ಲು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಗುರುತಿಸಲಾಗಿದೆ.</p>.<p>ಜಿಲ್ಲಾ ತಂಬಾಕು ನಿಯಂತ್ರಣ ಕೋಶದ 3ನೇ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಈ ವಿಷಯ ತಿಳಿಸಿದರು.</p>.<p>2025-26ನೇ ಸಾಲಿನಲ್ಲಿ 57 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಸಿದ್ಧತೆ ನಡೆದಿದೆ. ಈ ಗ್ರಾಮಗಳಲ್ಲಿ ತಂಬಾಕು ದುಷ್ಪರಿಣಾಮ, ಕೋಟ್ಪಾ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದಿನೇಶ್ ಇತರರು ಉಪಸ್ಥಿತರಿದ್ದರು.</p>
<p><strong>ತುಮಕೂರು:</strong> ಜಿಲ್ಲೆಯಲ್ಲಿ 57 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲು ಸಿದ್ಧತೆ ನಡೆದಿದ್ದು, ಈಗಾಗಲೇ 18 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲಾಗಿದೆ.</p>.<p>ಕೊರಟಗೆರೆ ತಾಲ್ಲೂಕಿನ ಅನುಪಲು, ಬಿ.ಎಂ.ಪಾಳ್ಯ, ಪಕ್ಕಿರಪ್ಪನ ಪಾಳ್ಯ, ಗೊಂದಿಹಳ್ಳಿ ಪ್ಲಾಂಟೇಷನ್, ಭದ್ರಯ್ಯನಪಾಳ್ಯ, ಹನುಮಂತಗಿರಿ; ತಿಪಟೂರು ತಾಲ್ಲೂಕಿನ ತಿಮ್ಲಾಪುರ, ಹುಣಸೇಘಟ್ಟ, ಮಾನವನಘಟ್ಟ, ಬೀರಸಂದ್ರ, ರಾಮಚಂದ್ರಪುರ, ಗಂಗನಘಟ್ಟ; ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಿಳಿಕಲ್ಲು ಗೊಲ್ಲರಹಟ್ಟಿ, ವಡ್ಡೇರಹಳ್ಳಿ, ಬಂಗಾರಗೆರೆ ಪಾಳ್ಯ, ದುರ್ಗದ ಸೀಮೆ ಪಾಳ್ಯ, ಎಂ.ಜಿ.ಪಾಳ್ಯ, ಅಡಾಣೆಕಲ್ಲು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಗುರುತಿಸಲಾಗಿದೆ.</p>.<p>ಜಿಲ್ಲಾ ತಂಬಾಕು ನಿಯಂತ್ರಣ ಕೋಶದ 3ನೇ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಈ ವಿಷಯ ತಿಳಿಸಿದರು.</p>.<p>2025-26ನೇ ಸಾಲಿನಲ್ಲಿ 57 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಸಿದ್ಧತೆ ನಡೆದಿದೆ. ಈ ಗ್ರಾಮಗಳಲ್ಲಿ ತಂಬಾಕು ದುಷ್ಪರಿಣಾಮ, ಕೋಟ್ಪಾ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದಿನೇಶ್ ಇತರರು ಉಪಸ್ಥಿತರಿದ್ದರು.</p>