<p><strong>ತುಮಕೂರು:</strong> ಟಾಸ್ಕ್ಗಳಿಗೆ ಹಣ ಹೂಡಿಕೆ ಮಾಡಿ, ಮನೆಯಲ್ಲಿ ಕುಳಿತುಕೊಂಡು ದುಪ್ಪಟ್ಟು ಲಾಭ ಗಳಿಸಬಹುದು ಎಂದು ನಂಬಿಸಿ ತಿಪಟೂರಿನ ವಿದ್ಯಾನಗರದ ಎಂಜಿನಿಯರ್ ಎ.ಎಸ್.ದರ್ಶನ್ ಕುಮಾರ್ ಎಂಬುವರಿಗೆ ₹13.58 ಲಕ್ಷ ವಂಚಿಸಲಾಗಿದೆ.</p>.<p>ವಾಟ್ಸ್ ಆ್ಯಪ್ನಲ್ಲಿ ಮೆಸೇಜ್ ಮಾಡಿದ ಅಪರಿಚಿತರು ಟಾಸ್ಕ್ ಬಗ್ಗೆ ತಿಳಿಸಿದ್ದಾರೆ. ಆನ್ಲೈನ್ನಲ್ಲಿ ಕೆಲಸ ಮಾಡುತ್ತಾ ಹಣ ಗಳಿಸಬಹುದು ಎಂದಿದ್ದಾರೆ. ನಂತರ ಟೆಲಿಗ್ರಾಮ್ ಗ್ರೂಪ್ಗೆ ಅವರ ನಂಬರ್ ಸೇರಿಸಿದ್ದಾರೆ. ಆರೋಪಿಗಳು ಹೇಳಿದಂತೆ ದರ್ಶನ್ ತಮ್ಮ ಬ್ಯಾಂಕ್ ಖಾತೆ ಅಪ್ಡೇಟ್ ಮಾಡಿಸಿದ್ದಾರೆ.</p>.<p>‘ನಿಮ್ಮ ಪರವಾಗಿ ಆನ್ಲೈನ್ನಲ್ಲಿ ವಸ್ತುಗಳ ಖರೀದಿ ಹಾಗೂ ಮಾರಾಟ ಮಾಡುತ್ತೇವೆ. ಇದಕ್ಕಾಗಿ ಹಣ ಹೂಡಿಕೆ ಮಾಡಬೇಕು’ ಎಂದು ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿ ಮೊದಲ ಬಾರಿಗೆ ₹10 ಸಾವಿರ ವರ್ಗಾಯಿಸಿದ್ದು, ಅವರ ಖಾತೆಗೆ ₹2 ಸಾವಿರ ಲಾಭಾಂಶ ಎಂದು ವಾಪಸ್ ಹಾಕಿದ್ದಾರೆ.</p>.<p>ಇನ್ನೂ ಹೆಚ್ಚಿನ ಹಣ ವರ್ಗಾವಣೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿದ ದರ್ಶನ್ ಹಂತ ಹಂತವಾಗಿ ಒಟ್ಟು ₹13,58,952 ವರ್ಗಾಯಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಇನ್ನೂ ₹11 ಲಕ್ಷ ವರ್ಗಾಯಿಸಿದರೆ ಮಾತ್ರ ಪೂರ್ತಿ ಹಣ ನೀಡಲಾಗುವುದು ಎಂದು ಆರೋಪಿಗಳು ತಿಳಿಸಿದ್ದಾರೆ. ಇದರಿಂದ ಅನುಮಾನ ಬಂದು ಸ್ನೇಹಿತರ ಬಳಿ ವಿಚಾರಿಸಿದಾಗ ಇದೊಂದು ಮೋಸದ ಜಾಲ ಎಂಬುವುದು ಗೊತ್ತಾಗಿದೆ.</p>.<p>ಮನೆಯಲ್ಲಿ ಕುಳಿತುಕೊಂಡು ಆನ್ಲೈನ್ನಲ್ಲಿ ಕೆಲಸ ಮಾಡುತ್ತಾ, ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ದರ್ಶನ್ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಟಾಸ್ಕ್ಗಳಿಗೆ ಹಣ ಹೂಡಿಕೆ ಮಾಡಿ, ಮನೆಯಲ್ಲಿ ಕುಳಿತುಕೊಂಡು ದುಪ್ಪಟ್ಟು ಲಾಭ ಗಳಿಸಬಹುದು ಎಂದು ನಂಬಿಸಿ ತಿಪಟೂರಿನ ವಿದ್ಯಾನಗರದ ಎಂಜಿನಿಯರ್ ಎ.ಎಸ್.ದರ್ಶನ್ ಕುಮಾರ್ ಎಂಬುವರಿಗೆ ₹13.58 ಲಕ್ಷ ವಂಚಿಸಲಾಗಿದೆ.</p>.<p>ವಾಟ್ಸ್ ಆ್ಯಪ್ನಲ್ಲಿ ಮೆಸೇಜ್ ಮಾಡಿದ ಅಪರಿಚಿತರು ಟಾಸ್ಕ್ ಬಗ್ಗೆ ತಿಳಿಸಿದ್ದಾರೆ. ಆನ್ಲೈನ್ನಲ್ಲಿ ಕೆಲಸ ಮಾಡುತ್ತಾ ಹಣ ಗಳಿಸಬಹುದು ಎಂದಿದ್ದಾರೆ. ನಂತರ ಟೆಲಿಗ್ರಾಮ್ ಗ್ರೂಪ್ಗೆ ಅವರ ನಂಬರ್ ಸೇರಿಸಿದ್ದಾರೆ. ಆರೋಪಿಗಳು ಹೇಳಿದಂತೆ ದರ್ಶನ್ ತಮ್ಮ ಬ್ಯಾಂಕ್ ಖಾತೆ ಅಪ್ಡೇಟ್ ಮಾಡಿಸಿದ್ದಾರೆ.</p>.<p>‘ನಿಮ್ಮ ಪರವಾಗಿ ಆನ್ಲೈನ್ನಲ್ಲಿ ವಸ್ತುಗಳ ಖರೀದಿ ಹಾಗೂ ಮಾರಾಟ ಮಾಡುತ್ತೇವೆ. ಇದಕ್ಕಾಗಿ ಹಣ ಹೂಡಿಕೆ ಮಾಡಬೇಕು’ ಎಂದು ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿ ಮೊದಲ ಬಾರಿಗೆ ₹10 ಸಾವಿರ ವರ್ಗಾಯಿಸಿದ್ದು, ಅವರ ಖಾತೆಗೆ ₹2 ಸಾವಿರ ಲಾಭಾಂಶ ಎಂದು ವಾಪಸ್ ಹಾಕಿದ್ದಾರೆ.</p>.<p>ಇನ್ನೂ ಹೆಚ್ಚಿನ ಹಣ ವರ್ಗಾವಣೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿದ ದರ್ಶನ್ ಹಂತ ಹಂತವಾಗಿ ಒಟ್ಟು ₹13,58,952 ವರ್ಗಾಯಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಇನ್ನೂ ₹11 ಲಕ್ಷ ವರ್ಗಾಯಿಸಿದರೆ ಮಾತ್ರ ಪೂರ್ತಿ ಹಣ ನೀಡಲಾಗುವುದು ಎಂದು ಆರೋಪಿಗಳು ತಿಳಿಸಿದ್ದಾರೆ. ಇದರಿಂದ ಅನುಮಾನ ಬಂದು ಸ್ನೇಹಿತರ ಬಳಿ ವಿಚಾರಿಸಿದಾಗ ಇದೊಂದು ಮೋಸದ ಜಾಲ ಎಂಬುವುದು ಗೊತ್ತಾಗಿದೆ.</p>.<p>ಮನೆಯಲ್ಲಿ ಕುಳಿತುಕೊಂಡು ಆನ್ಲೈನ್ನಲ್ಲಿ ಕೆಲಸ ಮಾಡುತ್ತಾ, ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ದರ್ಶನ್ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>