<p><strong>ತುಮಕೂರು:</strong> ‘ಅಹಿಂಸೆ, ಸಮಾನತೆ, ಶಾಂತಿ, ಮಾನವೀಯ ಮೌಲ್ಯ ಪ್ರತಿಪಾದಿಸಿದ ವ್ಯಕ್ತಿಯನ್ನು ಒಬ್ಬ ಹಂತಕ ಹತ್ಯೆ ಮಾಡುತ್ತಾನೆ. ಇದು ಒಬ್ಬ ವ್ಯಕ್ತಿಯ ಹತ್ಯೆಯಲ್ಲ. ಮೌಲ್ಯಗಳ ವಿರುದ್ಧದ ದ್ವೇಷ’ ಎಂದು ಹೋರಾಟಗಾರ ಕೆ.ದೊರೈರಾಜ್ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ಸೌಹಾರ್ದ ಕರ್ನಾಟಕ ಸಂಘಟನೆಯಿಂದ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಾನವೀಯ ಮೌಲ್ಯ ಪ್ರತಿಪಾದಿಸಿದ ಮಹಾತ್ಮ ಗಾಂಧೀಜಿ ಇಡೀ ಜಗತ್ತಿನ ಆಸ್ತಿ. ಪ್ರಸ್ತುತ ಆಧುನಿಕ ಗೋಡ್ಸೆಗಳು ಸುಳ್ಳು ಹರಡುತ್ತಾ ಗಾಂಧಿಯೇ ಸುಳ್ಳು ಎಂಬ ವಿಚಾರಗಳನ್ನು ಜನರಲ್ಲಿ ಬಿತ್ತುತ್ತಿದ್ದಾರೆ. ಗಾಂಧೀಜಿ ವಿಚಾರ ಮರೆಮಾಚುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಎಲ್ಲರು ಎಚ್ಚರಿಕೆಯಿಂದ ಗಮನಿಸಬೇಕು ಎಂದರು.</p>.<p>ಪರಿಸರವಾದಿ ಸಿ.ಯತಿರಾಜು, ‘ವಸಾಹತುಶಾಹಿ ನೀತಿಗಳಿಗೆ ದೇಶ ಬಲಿಯಾಗುತ್ತಿದೆ. ಗಾಂಧಿಯನ್ನು ಕೊಂದವರು ಸಂವಿಧಾನ ಕೊಲ್ಲಲು ಮುಂದಾಗಿದ್ದಾರೆ. ಸಂವಿಧಾನದ ಆಶಯಗಳಿಗೆ ಗುಂಡು ಹೊಡೆಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಗಾಂಧೀಜಿ ವಿಚಾರ ಉಳಿಸುವ ಅಗತ್ಯ ಹೆಚ್ಚಿದೆ’ ಎಂದು ಹೇಳಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ‘ಅಸಹಿಷ್ಣುತೆ, ಅಶಾಂತಿ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಯುವ ಸಮೂಹ ಗಾಂಧೀಜಿ ವಿಚಾರಗಳನ್ನು ಹೆಚ್ಚು ಪಾಲಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಸ್ಲಂ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ, ಮುಖಂಡರಾದ ಪಂಡಿತ್ ಜವಾಹರ್, ತಾಜುದ್ದೀನ್ ಷರೀಫ್, ಚಂದ್ರ, ಅರುಣ್, ಕಲ್ಪನಾ, ಎನ್.ಕೆ.ಸುಬ್ರಮಣ್ಯ, ಟಿ.ಜಿ.ಶಿವಲಿಂಗಯ್ಯ, ಅಶ್ವತ್ಥನಾರಾಯಣ್ ಗುಟ್ಟೆ, ಎಚ್.ಗೋವಿಂದಯ್ಯ, ಚಂದ್ರಪ್ಪ, ಇಂತಿಯಾಜ್, ರಾಘವೇಂದ್ರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಅಹಿಂಸೆ, ಸಮಾನತೆ, ಶಾಂತಿ, ಮಾನವೀಯ ಮೌಲ್ಯ ಪ್ರತಿಪಾದಿಸಿದ ವ್ಯಕ್ತಿಯನ್ನು ಒಬ್ಬ ಹಂತಕ ಹತ್ಯೆ ಮಾಡುತ್ತಾನೆ. ಇದು ಒಬ್ಬ ವ್ಯಕ್ತಿಯ ಹತ್ಯೆಯಲ್ಲ. ಮೌಲ್ಯಗಳ ವಿರುದ್ಧದ ದ್ವೇಷ’ ಎಂದು ಹೋರಾಟಗಾರ ಕೆ.ದೊರೈರಾಜ್ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ಸೌಹಾರ್ದ ಕರ್ನಾಟಕ ಸಂಘಟನೆಯಿಂದ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ, ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಾನವೀಯ ಮೌಲ್ಯ ಪ್ರತಿಪಾದಿಸಿದ ಮಹಾತ್ಮ ಗಾಂಧೀಜಿ ಇಡೀ ಜಗತ್ತಿನ ಆಸ್ತಿ. ಪ್ರಸ್ತುತ ಆಧುನಿಕ ಗೋಡ್ಸೆಗಳು ಸುಳ್ಳು ಹರಡುತ್ತಾ ಗಾಂಧಿಯೇ ಸುಳ್ಳು ಎಂಬ ವಿಚಾರಗಳನ್ನು ಜನರಲ್ಲಿ ಬಿತ್ತುತ್ತಿದ್ದಾರೆ. ಗಾಂಧೀಜಿ ವಿಚಾರ ಮರೆಮಾಚುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಎಲ್ಲರು ಎಚ್ಚರಿಕೆಯಿಂದ ಗಮನಿಸಬೇಕು ಎಂದರು.</p>.<p>ಪರಿಸರವಾದಿ ಸಿ.ಯತಿರಾಜು, ‘ವಸಾಹತುಶಾಹಿ ನೀತಿಗಳಿಗೆ ದೇಶ ಬಲಿಯಾಗುತ್ತಿದೆ. ಗಾಂಧಿಯನ್ನು ಕೊಂದವರು ಸಂವಿಧಾನ ಕೊಲ್ಲಲು ಮುಂದಾಗಿದ್ದಾರೆ. ಸಂವಿಧಾನದ ಆಶಯಗಳಿಗೆ ಗುಂಡು ಹೊಡೆಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಗಾಂಧೀಜಿ ವಿಚಾರ ಉಳಿಸುವ ಅಗತ್ಯ ಹೆಚ್ಚಿದೆ’ ಎಂದು ಹೇಳಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ‘ಅಸಹಿಷ್ಣುತೆ, ಅಶಾಂತಿ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಯುವ ಸಮೂಹ ಗಾಂಧೀಜಿ ವಿಚಾರಗಳನ್ನು ಹೆಚ್ಚು ಪಾಲಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಸ್ಲಂ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ, ಮುಖಂಡರಾದ ಪಂಡಿತ್ ಜವಾಹರ್, ತಾಜುದ್ದೀನ್ ಷರೀಫ್, ಚಂದ್ರ, ಅರುಣ್, ಕಲ್ಪನಾ, ಎನ್.ಕೆ.ಸುಬ್ರಮಣ್ಯ, ಟಿ.ಜಿ.ಶಿವಲಿಂಗಯ್ಯ, ಅಶ್ವತ್ಥನಾರಾಯಣ್ ಗುಟ್ಟೆ, ಎಚ್.ಗೋವಿಂದಯ್ಯ, ಚಂದ್ರಪ್ಪ, ಇಂತಿಯಾಜ್, ರಾಘವೇಂದ್ರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>